ಕರ್ನಾಟಕ

karnataka

ETV Bharat / state

ವ್ಯಕ್ತಿಗತ ಅಂತರದೊಂದಿಗೆ ಸ್ವಾತಂತ್ರೋತ್ಸವ ಸಂಭ್ರಮಿಸೋಣ: ಹೆಚ್‌ಡಿಕೆ - HDK wishes Happy Independence Day to the people

ದೇಶವೆಂದರೆ ಕೇವಲ ಮಣ್ಣಲ್ಲ. ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ ಎಂದು ಟ್ವೀಟ್​ ಮಾಡುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರು ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದಾರೆ.

ಹೆಚ್​ಡಿಕೆ
ಹೆಚ್​ಡಿಕೆ

By

Published : Aug 14, 2020, 8:12 PM IST

ಬೆಂಗಳೂರು:ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ-ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ ಎಂದು ಟ್ವೀಟ್​ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಈ ಸ್ವಾತಂತ್ರ್ಯವನ್ನು ಜಾಣತನದಿಂದ ಕಾಯ್ದುಕೊಂಡು ಹೋಗುವುದೇ ಸ್ವಾತಂತ್ರ್ಯವೀರರಿಗೆ ನಾವು ಸಲ್ಲಿಸಬಹುದಾದ ನಿಜವಾದ ಗೌರವ ಮತ್ತು ಅರ್ಥಪೂರ್ಣ ಸ್ವಾತಂತ್ರ್ಯ ಸಂಭ್ರಮವಾಗಲಿದೆ.

ಅಲ್ಲದೇ ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ. ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂಭ್ರಮಿಸೋಣ ಎಂದು ಹೆಚ್‌ಡಿಕೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ABOUT THE AUTHOR

...view details