ಕರ್ನಾಟಕ

karnataka

ETV Bharat / state

ನೆಲಮಂಗಲದಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು - Kannada news

ರಾಜಕಾಲುವೆ ಸ್ವಚ್ಛಗೊಳಿಸದ ಹಿನ್ನೆಲೆ ಒಮ್ಮೆಲೇ ಭಾರೀ ಪ್ರಮಾಣದ ನೀರು ರಾಜಕಾಲುವೆಯಲ್ಲಿ ಹರಿದು ಬಂದ ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದೆ.

ಭಾರಿ ಮಳೆಗೆ ಮನೆಗೆ ನುಗ್ಗಿದ ಚರಂಡಿ ನೀರು

By

Published : Jun 3, 2019, 8:57 AM IST

ನೆಲಮಂಗಲ: ಪಟ್ಟಣದ ಹಲವೆಡೆ ಬಿರುಗಾಳಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ರಾತ್ರೋರಾತ್ರಿ ಜೆಸಿಬಿಗಳು ಕಾರ್ಯಾಚರಣೆಗಿಳಿದಿದ್ದವು.

ಪಟ್ಟಣದ ಬೈರವೇಶ್ವರ ಲೇಔಟ್‌ನಲ್ಲಿನ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ರಾಜಕಾಲುವೆ ಸ್ವಚ್ಛಗೊಳಿಸದ ಹಿನ್ನೆಲೆ ಒಮ್ಮೆಲೇ ಭಾರೀ ಪ್ರಮಾಣದ ನೀರು ರಾಜಕಾಲುವೆಯಲ್ಲಿ ಹರಿದ ಪರಿಣಾಮ ಹೆಚ್ಚಾದ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದು, ಜನರು ರಾತ್ರಿಯೆಲ್ಲ ನೀರನ್ನು ಹೊರ ಹಾಕಲು ಹರಸಾಹಸ ಪಟ್ಟಿದ್ದಾರೆ.

ಭಾರಿ ಮಳೆಗೆ ಮನೆಗೆ ನುಗ್ಗಿದ ಚರಂಡಿ ನೀರು

ಮಳೆಯ ಆರ್ಭಟ ಹೆಚ್ಚಾದರೆ ಮತ್ತಷ್ಟು ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇತ್ತು. ಇದೇ ಭಯದಲ್ಲಿ ಇಲ್ಲಿನ ನಿವಾಸಿಗಳು ಆತಂಕದಲ್ಲಿಯೇ ರಾತ್ರಿ ಕಳೆದರು.

ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರನ್ಶು ಹೊರ ಹಾಕಲು ನೆಲಮಂಗಲ ಪುರಸಭೆ ಅಧಿಕಾರಿಗಳು ಜೆಸಿಬಿ ಮೊರೆ ಹೋದ್ರು. ರಾತ್ರೋರಾತ್ರಿ ಕಾರ್ಯಾಚರಣೆಗಿಳಿದ ಜೆಸಿಬಿಗಳು ರಾಜಕಾಲುವೆಯಲ್ಲಿ ಕಟ್ಟಿಕೊಂಡಿದ್ದ ಕಸವನ್ನು ಹೊರ ಹಾಕಿ ನೀರು ಸರಗವಾಗಿ ಹರಿದು ಹೋಗುವಂತೆ ಮಾಡಲಾಯಿತ.

ABOUT THE AUTHOR

...view details