ಆನೇಕಲ್:ರಾಜ್ಯದಲ್ಲಿವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ನಡುವೆಯೂ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದ್ದ 4 ಕೋಟಿ 75 ಲಕ್ಷ ನಗದನ್ನು ವೀರಸಂದ್ರ ಸಿಗ್ನಲ್ ಬಳಿಯ ಚೆಕ್ ಪೋಸ್ಟ್ ಬಳಿ ಹೆಬ್ಬಗೋಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೆಬ್ಬಗೋಡಿ ಪೊಲೀಸರಿಂದ 4.75 ಕೋಟಿ ನಗದು ವಶ
ನೀತಿ ಸಂಹಿತೆಯನ್ನು ಉಲ್ಲಂಘಿಸಿ ಹಣ ವರ್ಗವಣೆ ಮಾಡುತ್ತಿದ್ದ 4 ಕೋಟಿ 75 ಲಕ್ಷ ನಗದನ್ನು ವೀರಸಂದ್ರ ಸಿಗ್ನಲ್ ಬಳಿಯ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Published : Apr 8, 2023, 7:06 PM IST
Published : Apr 8, 2023, 7:06 PM IST
|Updated : Apr 8, 2023, 7:15 PM IST
ಖಾಸಗಿ ಕಂಪನಿಯ ಮೂರು ವಾಹನಗಳು ಸೇರಿದಂತೆ ಕೋಟ್ಯಾಂತರ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ 10 ಲಕ್ಷದಷ್ಟು ಹೆಚ್ಚುವರಿ ಹಣ ಸಾಗಣೆ ಹಿನ್ನೆಲೆ ದೂರು ದಾಖಲಾಗಿತ್ತು. ಹಣ ಸಾಗಿಸಲು ಆರ್ಬಿಐ ಪ್ರಕಾರ ಪ್ರೋಟೊಕಾಲ್ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆ ಚುನಾವಣಾ ನೀತಿ ಸಂಹಿತೆ ಪ್ರಕಾರ ಉಳಿದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಹೆಬ್ಬಗೋಡಿ ಪೊಲೀಸರು ಹಣ ವಶಕ್ಕೆ ಪಡೆದಿರುವ ಬಗ್ಗೆ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಇದನ್ನೂ ಓದಿ:ಬೀದರ್ ಪೊಲೀಸರ ಭರ್ಜರಿ ಬೇಟೆ.. ಒಂದು ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶ