ಕರ್ನಾಟಕ

karnataka

ಶ್ರೀರಾಮುಲು ಚೆಕ್ ಬೌನ್ಸ್ ಪ್ರಕರಣ : ಅಮೈಕಸ್ ಕ್ಯೂರಿ ನೇಮಿಸಿದ ಹೈಕೋರ್ಟ್

By

Published : Aug 30, 2021, 9:52 PM IST

ಬಿ.ಶ್ರೀರಾಮುಲು ಅವರು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾಗ 2014ರಲ್ಲಿ ಮೈಸೂರಿನ ಎಲ್.ಸೋಮಣ್ಣ ಎಂಬುವರಿಂದ ಮೂರು ಕಂತಿನಲ್ಲಿ ಒಟ್ಟು 2,96 ಕೋಟಿ ರೂ. ಹಣ ಪಡೆದಿದ್ದರು. ಹಣ ವಾಪಸ್ ಕೇಳಿದಾಗ ವಿಧಾನ ಪರಿಷತ್ ಸದಸ್ಯ ಸ್ಥಾನ ಇಲ್ಲವೇ ಬಳ್ಳಾರಿ ಲೋಕಸಭೆ ಟಿಕೆಟ್ ನೀಡುವ ಭರವಸೆ ನೀಡಿದ್ದರು..

high-court-hearing-on-appeal-about-sriramulu-check-bounce-case
ಶ್ರೀರಾಮುಲು ಚೆಕ್ ಬೌನ್ಸ್ ಪ್ರಕರಣ : ಅಮೈಕಸ್ ಕ್ಯೂರಿ ನೇಮಿಸಿದ ಹೈಕೋರ್ಟ್

ಬೆಂಗಳೂರು :ಹಣ ಪಡೆದು ಹಿಂದಿರುಗಿಸದೆ ವಂಚಿಸಿದ ಆರೋಪ ಪ್ರಕರಣದಿಂದ ಸಚಿವ ಬಿ.ಶ್ರೀರಾಮುಲು ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಗೆ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ಕಲ್ಪಿಸಲು ವಕೀಲ ಮೂರ್ತಿ ಡಿ.ನಾಯಕ್ ಅವರನ್ನು ಅಮೈಕಸ್ ಕ್ಯೂರಿ ಆಗಿ ಹೈಕೋರ್ಟ್ ನೇಮಿಸಿದೆ.

ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ದೂರುದಾರ ಎಲ್.ಸೋಮಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಸುನೀಲ್‌ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ಮಾಡಿದೆ. ಕಳೆದ ವಿಚಾರಣೆ ವೇಳೆ ಮೇಲ್ಮನವಿಯಲ್ಲಿ 2ನೇ ಪ್ರತಿವಾದಿಯಾಗಿರುವ ಸಚಿವ ಬಿ.ಶ್ರೀರಾಮುಲು ಅವರಿಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಆದರೆ, ವಕೀಲರು ವಿಚಾರಣೆಗೆ ಹಾಜರಾಗಲಿಲ್ಲ.

ಇದನ್ನು ಪರಿಗಣಿಸಿದ ಪೀಠ, ಸಚಿವರ ಪರ ವಕೀಲರು ವಿಚಾರಣೆಗೆ ಹಾಜರಾಗಿಲ್ಲ. ಸಚಿವರ ಪರ ವಕೀಲರು ಪ್ರತಿನಿಧಿಸದಿದ್ದರೂ ವಿಚಾರಣೆಯನ್ನು ತಡೆಹಿಡಿಯುವುದು ಬೇಡ. ಮೇಲ್ಮನವಿಯಲ್ಲಿ ಪ್ರತಿವಾದಿಯಾಗಿರುವ ಬಳ್ಳಾರಿ ಪೊಲೀಸರ ಪರವಾಗಿ ಸರ್ಕಾರಿ ಅಭಿಯೋಜಕರು ವಾದಿಸುತ್ತಾರೆ.

ಆದ್ದರಿಂದ ನ್ಯಾಯಾಲಯಕ್ಕೆ ಪ್ರಕರಣ ಕುರಿತು ಅಗತ್ಯ ಸಲಹೆ ಹಾಗೂ ನೆರವು ನೀಡಲು ಅಮಿಕಸ್ ಕ್ಯೂರಿಯನ್ನು ನೇಮಿಸಬಹುದು ಎಂದು ಅಭಿಪ್ರಾಯಪಟ್ಟು, ವಕೀಲ ಮೂರ್ತಿ ಡಿ.ನಾಯಕ್ ಅವರನ್ನು ಅಮೈಕಸ್ ಕ್ಯೂರಿ ಆಗಿ ನೇಮಿಸಿ, ವಿಚಾರಣೆಯನ್ನು ಸೆ.14ಕ್ಕೆ ಮುಂದೂಡಿತು.

ಅರ್ಜಿದಾರರ ಆರೋಪವೇನು?:ಬಿ.ಶ್ರೀರಾಮುಲು ಅವರು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾಗ 2014ರಲ್ಲಿ ಮೈಸೂರಿನ ಎಲ್.ಸೋಮಣ್ಣ ಎಂಬುವರಿಂದ ಮೂರು ಕಂತಿನಲ್ಲಿ ಒಟ್ಟು 2,96 ಕೋಟಿ ರೂ. ಹಣ ಪಡೆದಿದ್ದರು. ಹಣ ವಾಪಸ್ ಕೇಳಿದಾಗ ವಿಧಾನ ಪರಿಷತ್ ಸದಸ್ಯ ಸ್ಥಾನ ಇಲ್ಲವೇ ಬಳ್ಳಾರಿ ಲೋಕಸಭೆ ಟಿಕೆಟ್ ನೀಡುವ ಭರವಸೆ ನೀಡಿದ್ದರು.

ಆದರೆ, ಶ್ರೀರಾಮುಲು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಹಾಗೂ ಎಂಎಲ್‌ಸಿ ಸ್ಥಾನವನ್ನೂ ಕಲ್ಪಿಸಿಕೊಡಲಿಲ್ಲ. ಬ್ಯಾಂಕಿಗೆ ಚೆಕ್ ಜಮೆ ಮಾಡಿದಾಗ ಬೌನ್ಸ್ ಆಗಿದೆ. ಹಣ ಕೇಳಲು ಬಳ್ಳಾರಿ ಮನೆಗೆ ಹೋಗಿದ್ದಾಗ ಶ್ರೀರಾಮುಲು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಕುರಿತು ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಬಳ್ಳಾರಿಯ ವಿಶೇಷ ನ್ಯಾಯಾಲಯ, ಶ್ರೀರಾಮುಲು ಅವರನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಡ್ರಗ್ಸ್​ ಪ್ರಕರಣ.. ಬೆಂಗಳೂರಲ್ಲಿ ಮಾಡೆಲ್​, ಡಿಜೆ ಮನೆ ಮೇಲೆ ಪೊಲೀಸ್​ ದಾಳಿ.. ಮೂವರು ವಶಕ್ಕೆ..

ABOUT THE AUTHOR

...view details