ಕರ್ನಾಟಕ

karnataka

ETV Bharat / state

High Court: ವಿದ್ಯಾರ್ಥಿಗಳ ಮೇಲೆ ಕಠಿಣ ಶಿಸ್ತು ಕ್ರಮ ಪರಿಶೀಲಿಸಲು ಹೈಕೋರ್ಟ್ ಸೂಚನೆ - High Court

ವಿದ್ಯಾರ್ಥಿಗಳ ಮೇಲೆ ಕಠಿಣ ಶಿಸ್ತು ಕ್ರಮ ಪರಿಶೀಲಿಸಲು ಹೈಕೋರ್ಟ್​ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೂಚನೆ ನೀಡಿದೆ.

High Court
ಹೈಕೋರ್ಟ್

By

Published : Jun 28, 2023, 9:29 PM IST

ಬೆಂಗಳೂರು:ಶಾಲೆಗಳು ವಿದ್ಯಾರ್ಥಿಗಳ ಮೇಲೆ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸುವುದು ಆ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಅಂತಹ ನೀತಿಯನ್ನು ಮರು ಪರಿಶೀಲಿಸಬೇಕು ಎಂದು ಹೈಕೋರ್ಟ್ ಶಾಲೆಗಳಿಗೆ ಸಲಹೆ ನೀಡಿದೆ. ಕೊಡಗಿನ ಶಾಲಾ ಸಿಬ್ಬಂದಿಯಾದ ಗೌರಮ್ಮ, ದತ್ತ ಕುರುಂಬಯ್ಯ ಮತ್ತು ಚೇತನಾ ಬೋಪಣ್ಣ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪ್ರಸ್ತುತದ ಪ್ರಕರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಇದು ಐಪಿಸಿ ಸೆಕ್ಷನ್ 107 ಮತ್ತು ಜೊತೆಗೆ ಅದು ಸೆಕ್ಷನ್ 304 ಕೂಡ ಅನ್ವಯವಾಗುತ್ತದೆ. ವಿದ್ಯಾರ್ಥಿ ಪ್ರಾಣ ಕಳೆದುಕೊಳ್ಳುವಂತಹ ಸ್ಥಿತಿ ತಲುಪಲು ಶಾಲೆಯ ಸಿಬ್ಬಂದಿಯೇ ಪ್ರಚೋದನೆ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ವಿಚಾರಣೆಯಲ್ಲಿ ಸಾಬೀತಾಗಲಿ ಎಂದು ನ್ಯಾಯಪೀಠ ಹೇಳಿದೆ. ಶಾಲೆಗಳಲ್ಲಿ ಕೈಗೊಳ್ಳುವ ಕಠಿಣ ಶಿಸ್ತು ಕ್ರಮಗಳು ಕೆಲವೊಮ್ಮೆ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಗಂಭೀರ ಪರಿಣಾಮಗಳನ್ನು ಬೀರಲಿವೆ. ಹಾಗಾಗಿ ಶಾಲೆಗಳು ತಮ್ಮ ಪುರಾತನ ಮನಸ್ಥಿತಿ ಬದಲಿಸಿಕೊಳ್ಳಬೇಕು ಮತ್ತು ಮಕ್ಕಳ ಜೀವ ಹರಣವಾಗುವುದನ್ನು ತಪ್ಪಿಸಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಬಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 15 ನಿಮಿಷದವರೆಗೆ ಶಾಲೆಯ ಜತ ಸಂಪರ್ಕದಲ್ಲಿದ್ದನು. ಹಾಗಾಗಿ ಮೇಲ್ನೋಟಕ್ಕೆ ಪ್ರಕರಣದಲ್ಲಿ ಸತ್ಯಾಂಶವಿದೆ ಎಂದು ಅನಿಸುತ್ತಿದೆ. ಪ್ರಕರಣದಲ್ಲಿ ಶಾಲೆ ತನ್ನ ತಪ್ಪು ಮುಚ್ಚಿಹಾಕಿಕೊಳ್ಳಲು ವಿದ್ಯಾರ್ಥಿಯ ಮೇಲೆ ಆರೋಪ ಹೊರಿಸುತ್ತಿದೆ. ಹಾಗಾಗಿ ಪ್ರಕರಣದಲ್ಲಿ ಮುಂದಿನ ವಿಚಾರಣೆ ನಡೆದು ಸತ್ಯಾಸತ್ಯತೆ ಹೊರಬೀಳಬೇಕಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ:ಕೊಡಗಿನ 9ನೇ ತರಗತಿಯ ವಿದ್ಯಾರ್ಥಿಯನ್ನು ಆತ ಶಾಲೆಗೆ ಮದ್ಯ ತಂದಿದ್ದ ಆರೋಪದಡಿ ಶಾಲಾ ಆಡಳಿತ ಮಂಡಳಿ ಆ ವಿದ್ಯಾರ್ಥಿಯನ್ನು ಅಮಾನತುಪಡಿಸಿತ್ತು. ಪರೀಕ್ಷೆಗೂ ಕೂರಿಸದೇ ಮನೆಯಿಂದಲೇ ಪರೀಕ್ಷೆ ಬರೆಸುವುದಾಗಿ ಭರವಸೆ ನೀಡಿತ್ತು. ಆದರೆ ಆನ್ ಲೈನ್ ಲಿಂಕ್ ಕಳಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಹಾಗಾಗಿ ಶಾಲಾ ಸಿಬ್ಬಂದಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಬಿ ರಿಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿ, ಶಾಲೆಯ ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಾರ್ಡನ್ ವಿರುದ್ಧದ ಪ್ರಕರಣ ಮುಂದುವರಿಸಿತ್ತು. ಹಾಗಾಗಿ ಅವರು ಪ್ರಕರಣ ರದ್ದು ಕೋರಿ ಆರೋಪಿತರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ:High Court: ಅಕ್ರಮ ಆಸ್ತಿ ಸಕ್ರಮಗೊಳಿಸಲು ನೆರವು ಪ್ರಕರಣ: ಎಂ.ಆರ್.ಸೀತಾರಾಮ್ ವಿರುದ್ಧದ ಪ್ರಕರಣ ರದ್ದತಿ ಅರ್ಜಿ ವಜಾ

ABOUT THE AUTHOR

...view details