ಕರ್ನಾಟಕ

karnataka

ETV Bharat / state

'ಸುಧಾಕರ್ ಹೇಳಿಕೆ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖೆ ಆಗಲಿ' - Opposition leader Siddaramaiah

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಸುಧಾಕರ್ ಅವರ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತಂಡಕ್ಕೆ ತನಿಖೆಗೆ ತಕ್ಷಣವೇ ಆದೇಶ ಹೊರಡಿಸಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

Opposition leader Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

By

Published : Mar 24, 2021, 8:50 PM IST

ಬೆಂಗಳೂರು: ಸಚಿವ ಡಾ. ಸುಧಾಕರ್ ಹೇಳಿಕೆಯ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖೆಗೆ ತಕ್ಷಣವೇ ಆದೇಶ ಹೊರಡಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬರೆದಿರುವ ಪತ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಅವರು, ಡಾ.ಸುಧಾಕರ್ ಅವರು ಹೇಳಿರುವಂತೆ 225 ಸದಸ್ಯರ ಪೈಕಿ ತಾವೂ ಕೂಡ ಒಬ್ಬರಾಗಿರುವುದರಿಂದ ಸದರಿ ತನಿಖೆಗೆ ಸಿದ್ಧರಿದ್ದೀರಾ ಎಂದು ತಿಳಿಯಲಿಚ್ಚಿಸುತ್ತೇವೆ. ಈ ಎಲ್ಲಾ ಕಾರಣಗಳಿಂದ ಸಚಿವ ಸುಧಾಕರ್ ಅವರ ಹೇಳಿಕೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ಕಾಂಗ್ರೆಸ್ ಪಕ್ಷವು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಹಾಗೂ ಡಾ.ಸುಧಾಕರ್ ಅವರೂ ಸೇರಿದಂತೆ ಆರು ಮಂದಿ ಸಚಿವರು ಸುದ್ದಿ ಮಾಧ್ಯಮಗಳಲ್ಲಿ ತಮ್ಮ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದನ್ನು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್.ಐ.ಟಿ ತನಿಖೆಗೆ ಒತ್ತಾಯಿಸಿದೆ. ಸುಧಾಕರ್ ಅವರು ಹೆಸರಿಸಿರುವವರ ಪೈಕಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಕುಮಾರ್ ಆದ ನಾವೂ ಕೂಡ ಕೋರ್ಟ್ ಉಸ್ತುವಾರಿಯ ಎಸ್.ಐ.ಟಿ ತನಿಖೆಗೆ ಒಳಪಡಲು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವ ಸುಧಾಕರ್‌ ಏಕಪತ್ನಿ ವ್ರತಸ್ಥ ಚಾಲೆಂಜ್‌ಗೆ ಸಿದ್ದು, ಹೆಚ್‌ಡಿಕೆ, ಡಿಕೆಶಿ, ಸೌಮ್ಯ ರೆಡ್ಡಿ ಹೀಗೆಲ್ಲ ಪ್ರತಿಕ್ರಿಯಿಸಿದರು..

ಡಾ.ಸುಧಾಕರ್ ಅವರು ಸಾಮಾನ್ಯ ವ್ಯಕ್ತಿಯಲ್ಲ. ರಾಜ್ಯದ ಗೌರವಾನ್ವಿತ ಸಚಿವರಾಗಿರುವವರು. ಅವರ ಹೇಳಿಕೆ ಗಂಭೀರ ಸ್ವರೂಪದ್ದಾಗಿದೆ. ಎಲ್ಲಾ ಶಾಸಕರ ನೈತಿಕತೆಯನ್ನು ಪ್ರಶ್ನಿಸುವಂಥದ್ದಾಗಿದೆ. ಸದನ ನಡೆಯುತ್ತಿರುವಾಗ ಸಚಿವರು ಮಾಡಿರುವ ಈ ಹೇಳಿಕೆ ಸದನದ ನಿಂದನೆಯಾಗುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಆಯಾ ಶಾಸಕರ ಕುಟುಂಬದ ಸದಸ್ಯರಲ್ಲಿ ಅನುಮಾನ ಮೂಡಲು ಆಸ್ಪದ ಮಾಡಿಕೊಟ್ಟಿದೆ ಎಂದು ಪತ್ರದಲ್ಲಿ ವಿವರಿಸಿದ್ದು, ಸೂಕ್ತ ತನಿಖೆಗೆ ಆದೇಶಿಸುವಂತೆ ಮನವಿ ಮಾಡಿದ್ದಾರೆ.

ABOUT THE AUTHOR

...view details