ಕರ್ನಾಟಕ

karnataka

ಮೃತದೇಹಗಳ ಮೇಲೆ ಅತ್ಯಾಚಾರವೆಸಗುವ ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಐಪಿಸಿಗೆ ಹೊಸ ನಿಬಂಧನೆ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು

By

Published : May 31, 2023, 4:32 PM IST

ಶಿಕ್ಷೆಗೆ ಗುರಿಯಾಗಿರುವ ಗುಲ್ಲಿಗೇನಹಳ್ಳಿಯ ರಂಗರಾಜು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ್ದಾಗ ಈ ಶಿಫಾರಸು ಮಾಡಿದೆ.

ಹೈಕೋರ್ಟ್ ಶಿಫಾರಸ್ಸು
ಹೈಕೋರ್ಟ್ ಶಿಫಾರಸ್ಸು

ಬೆಂಗಳೂರು :ಮೃತದೇಹಗಳ ಮೇಲೆ ಲೈಂಗಿಕ ಕ್ರಿಯೆಗಳನ್ನು ನಡೆಸುವಂತಹ ಅಪರಾಧಿಗಳಿಗೆ ಶಿಕ್ಷೆ ವಿಧಿಸುವುದಕ್ಕಾಗಿ ಭಾರತೀಯ ದಂಡ ಸಂಹಿತೆಯ(ಐಪಿಸಿ) ಕೆಲವು ನಿಬಂಧನೆಗಳನ್ನು ತಿದ್ದುಪಡಿ ಮಾಡುವುದು ಅಥವಾ ಹೊಸ ನಿಬಂಧನೆಗಳನ್ನು ಜಾರಿ ಮಾಡುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೊಲೆ ಮತ್ತು ಮೃತದೇಹದ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಗುಲ್ಲಿಗೇನಹಳ್ಳಿಯ ರಂಗರಾಜು ಎಂಬುವರು ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದ ನ್ಯಾಯಪೀಠ ಈ ಶಿಫಾರಸು ಮಾಡಿದೆ.

ಅಲ್ಲದೆ, ಮಹಿಳೆಯೊಬ್ಬರನ್ನು ಕೊಲೆ ಮಾಡಿ ಅತ್ಯಾಚಾರ ವೆಸಗಿದ್ದ ಆರೋಪಿಗೆ ಕೊಲೆ (ಸೆಕ್ಷನ್ 302)ರ ಅಡಿ ಪ್ರಕರಣದಲ್ಲಿ ಮಾತ್ರ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರು.ಗಳನ್ನು ದಂಡ ವಿಧಿಸಲಾಗಿದೆ. ಆದರೆ, ಮೃತದೇಹದ ಮೇಲೆ ಅತ್ಯಾಚಾರ (ಸೆಕ್ಷನ್ 376)ವೆಸಗಿದ ಆರೋಪದಲ್ಲಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿಲ್ಲದ ಪರಿಣಾಮ ಖುಲಾಸೆ ಗೊಳಿಸುವಂತಾಗಿದೆ. ಹೀಗಾಗಿ ಮೃತ ದೇಹಗಳ ಮೇಲೆ ಅತ್ಯಾಚಾರ ವೆಸಗುವವರಿಗೆ ಶಿಕ್ಷೆ ವಿಧಿಸುವುದಕ್ಕಾಗಿ ಐಪಿಸಿ ಸೆಕ್ಷನ್‌ಗಳಿಗೆ ಅಗತ್ಯ ತಿದ್ದುಪಡಿ ಅಥಾವ ಹೊಸ ನಿಬಂಧನೆಗಳನ್ನು ಸೇರ್ಪಡೆ ಮಾಡಬೇಕು ಎಂದು ನ್ಯಾಯಪೀಠ ಶಿಫಾರಸು ಮಾಡಿದೆ.

ಆರೋಪಿಯು ಮೃತದೇಹವನ್ನು ಅತ್ಯಾಚಾರ ವೆಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಆರೋಪ ಐಪಿಸಿ 375 ಅಥಾವ 377 ಅಡಿಯಲ್ಲಿ ಬರಲಿದಿಯೇ? ಈ ಎರಡೂ ಸೆಕ್ಷನ್‌ಗಳ ಅಡಿಯಲ್ಲಿ ಮೃತದೇಹವನ್ನು ಮನಷ್ಯ ಅಥಾವ ವ್ಯಕ್ತಿ ಎಂಬುದಾಗಿ ಪರಿಗಣಿಸಲಾಗುವುದಿಲ್ಲ. ಈ ನಿಟ್ಟಿನಲ್ಲಿ ಮೃತದೇಹಗಳ ಮೇಲೆ ಅತ್ಯಾಚಾರವೆಸಗುವ ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಅಗತ್ಯ ನಿಬಂಧನೆಗಳನ್ನು ರೂಪಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸಲಹೆ ನೀಡಿದೆ.

ಜೊತೆಗೆ, ಕೆನಡಾ, ಯುಕೆ, ನ್ಯೂಜಿಲ್ಯಾಂಡ್​ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಹಲವಾರು ದೇಶಗಳ ಉದಾಹರಣೆಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಆ ದೇಶಗಳಲ್ಲಿ ಮೃತದೇಹಗಳ ವಿರದ್ಧದ ಅಪರಾಧವು ಶಿಕ್ಷಾರ್ಹವಾಗಿದೆ. ಅಂತಹ ನಿಬಂಧನೆಗಳನ್ನು ಭಾರತದಲ್ಲಿಯೂ ಪರಿಚಯಿಸಬೇಕು ಎಂದು ನ್ಯಾಯಪೀಠ ಶಿಫಾರಸು ಮಾಡಿದೆ. ಅಲ್ಲದೇ, ಐಪಿಸಿ ಸೆಕ್ಷನ್ 377ರ ನಿಬಂಧನೆಗಳನ್ನು ತಿದ್ದುಪಡಿ ಮಾಡುವುದುಕ್ಕೆ ಕೇಂದ್ರ ಸರ್ಕಾರಕ್ಕೆ ಇದು ಸೂಕ್ತ ಸಮಯವಾಗಿದೆ.

ಈ ನಿಬಂಧನೆಯಲ್ಲಿ ಪುರುಷ, ಮಹಿಳೆ ಮತ್ತು ಪ್ರಾಣಿಗಳ ಮೃತದೇವನ್ನು ಸೇರ್ಪಡೆ ಮಾಡಬೇಕು. ಇಲ್ಲವಾದಲ್ಲಿ ಮಹಿಳೆಯ ಮೃತದೇಹವನ್ನು ಸ್ವಾಭಾವಿಕ ಹಾಗೂ ದೈಹಿಕವಾಗಿ ಸಂಭೋಗ ಮಾಡುವ ವ್ಯಕ್ತಿಯ ವಿರುದ್ಧ ಸ್ಯಾಡಿಸಂ ಕುರಿತು ಹೊಸ ನಿಬಂಧನೆಯನ್ನು ಸೇರ್ಪಡೆ ಮಾಡಬೇಕು. ಮಹಿಳೆಯ ಮೃತದೇವನ್ನು ಒಳಗೊಂಡಂತೆ ಪ್ರಕೃತಿಯ ವಿರುದ್ಧ(ಅನೈಸರ್ಗಿಕ ಲೈಂಗಿಕ ಕ್ರಿಯೆ) ವಿರುದ್ಧ ಸಂಭೋಗ ನಡೆಸುವವರಿಗೆ ಜೀವಾವಧಿ ಅಥಾವ 10 ವರ್ಷಗಳ ಕಾಲಕ್ಕೆ ವಿಸ್ತರಿಸಬಹುದಾದ ಶಿಕ್ಷೆ ನೀಡುವಂತೆಹ ನಿಬಂಧನೆಯನ್ನು ಸೇರ್ಪಡೆ ಮಾಡಬೇಕು ಎಂದು ನ್ಯಾಯಪೀಠ ಶಿಫಾರಸು ಮಾಡಿದೆ.

ಅಲ್ಲದೆ, ಮುಂದಿನ ಆರು ತಿಂಗಳಲ್ಲಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಶವಾಗಾರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದೆ. ಶವಾಗಾರಗಳಲ್ಲಿ ನೈರ್ಮಲ್ಯ ಕಾಪಾಡುವುದು ಮತ್ತು ಸಿಬ್ಬಂದಿಯ ತರಬೇತಿ ನೀಡಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು? :ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ಗುಲ್ಲಿಗೇನಹಳ್ಳಿಯ ವಿದ್ಯಾರ್ಥಿನಿಯನ್ನು ಅದೇ ಗ್ರಾಮದ ಅರ್ಜಿದಾರ ಅಪರಾಧಿ ಕತ್ತು ಸೀಳಿ ಕೊಲೆ ಮಾಡಿದ್ದ. ಇದಾದ ಬಳಿಕ ಮೃತ ದೇಹವನ್ನು ಅತ್ಯಾಚಾರ ಮಾಡಿದ್ದ. ಈ ಸಂಬಂಧ ಸಂತ್ರಸ್ತೆಯ ಸಹೋದರ ನೀಡಿದ ದೂರು ಪರಿಗಣಿಸಿ ಘಟನೆ ನಡೆದ ಏಳು ದಿನಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಘಟನೆ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಅಪರಾಧಿಯ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಅದರಂತೆ ವಿಚಾರಣಾ ನ್ಯಾಯಾಲಯ ಆರೋಪಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ದಂಡ, ಹಾಗೂ ಅತ್ಯಾಚಾರ ಆರೋಪದಲ್ಲಿ 10 ವರ್ಷ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿದ್ದ ಅಪರಾಧಿ ಮೃತದೇಹವನ್ನು ವ್ಯಕ್ತಿಯನ್ನಾಗಿ ಪರಿಗಣಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ಮೃತದೇಹವನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ವಿಧಿಸಿರುವ ಶಿಕ್ಷೆಯನ್ನು ರದ್ದು ಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೊಲೆ ಆರೋಪದಲ್ಲಿ ವಿಧಿಸಿರುವ ಶಿಕ್ಷೆಯನ್ನು ಎತ್ತಿ ಹಿಡಿರುವ ಹೈಕೋರ್ಟ್, ಅತ್ಯಾಚರ ಆರೋಪದ ಶಿಕ್ಷೆಯನ್ನುನ ರದ್ದು ಪಡಿಸಿ ಆದೇಶಿಸಿದೆ.

ಇದನ್ನೂ ಓದಿ :ಧಾರವಾಡ, ಕಲಬುರಗಿ ಪೀಠದಿಂದ ಬಡಕಕ್ಷಿದಾರರಿಗೆ ತ್ವರಿತ ನ್ಯಾಯ: ಹೈಕೋರ್ಟ್

ABOUT THE AUTHOR

...view details