ಬೆಂಗಳೂರು : ಉಡುಪಿ ಮೂಲದ ಉದ್ಯಮಿಯ ಪುತ್ರನನ್ನು ಅಪಹರಿಸಿ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ 2019ರಲ್ಲಿ ಬೆದರಿಕೆ ಹಾಕಿದ್ದ ಪ್ರಕರಣದ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿಕುಮಾರ್ ಅಲಿಯಾಸ್ ಶಶಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಶಶಿಪೂಜಾರಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಕ್ರೈಮ್ ಸಿಂಡಿಕೇಟ್ಗಾಗಿ ವೈಯಕ್ತಿಕವಾಗಿ ಕಾರ್ಯನಿರ್ವಹಿಸುವ ಆರೋಪಿಯ ವಿರುದ್ಧವೂ ಸಹ ಕರ್ನಾಟಕ ಅಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) ಅನ್ವಯವಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಆರೋಪಿ ಬಿಡುಗಡೆ ಮಾಡಿದಲ್ಲಿ ಆತನಿಂದ ಸಮಾಜಕ್ಕೆ ಅಪಾಯವಿದೆ. ಅಂತಹ ಆರೋಪಿಯನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ನಿಟ್ಟಿನಲ್ಲಿ ಜಾಮೀನು ತಿರಸ್ಕರಿಸುತ್ತಿರುವುದಾಗಿ ನ್ಯಾಯಪೀಠ ತಿಳಿಸಿದೆ. ಆರೋಪಿ ತನಗೂ ಕೃತ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾನೆ. ಆದರೆ ಅರ್ಜಿದಾರರ ಸಹೋದರ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ರವಿಚಂದ್ರ ಪೂಜಾರಿ ಜೈಲಿನಲ್ಲಿದ್ದುಕೊಂಡೇ ಅರ್ಜಿದಾರರ ಹೆಸರಿನಲ್ಲಿ ಸಿಮ್ಕಾರ್ಡ್ ಪಡೆದಿರುವುದಾಗಿ ಹೇಳಿದೆ.
ಆರೋಪ ಪಟ್ಟಿಯಲ್ಲಿನ ಹಲವು ಅಂಶಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಅರ್ಜಿದಾರರು ಹಲವು ಬಾರಿ ಬನ್ನಂಜೆ ರಾಜನನ್ನು ಭೇಟಿಯಾಗಿದ್ದಾನೆಂಬುದು ತನಿಖೆ ವೇಳೆ ಪತ್ತೆಯಾಗಿದೆ. ಹಾಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಆದೇಶಿಸಿದೆ. ಆರೋಪಿಯು ಅಪರಾಧ ಸಿಂಡಿಕೇಟ್ಗಾಗಿ ವೈಯಕ್ತಿಕವಾಗಿ ಕಾರ್ಯನಿರ್ವಹಿಸಿದ್ದರೂ ಸಹ, ಕರ್ನಾಟಕ ಸಂಘಟಿತ ಅಪರಾಧಗಳ ಕರ್ನಾಟಕ ನಿಯಂತ್ರಣ ಕಾಯ್ದೆ (ಕೆಸಿಒಸಿಎ) 200ರ ಅಡಿ ಅಪರಾಧಗಳಿಗೆ ಶಿಕ್ಷೆಗೆ ಗುರಿಯಾಗಬಹುದು ಎಂದು ದರೋಡೆಕೋರರ ಆಪಾದಿತ ಸಹಚರನಿಗೆ ಜಾಮೀನು ನೀಡಲು ನಿರಾಕರಿಸುವ ವೇಳೆ ಹೇಳಿದೆ.