ಕರ್ನಾಟಕ

karnataka

ETV Bharat / state

ಕಾರ್ಮಿಕರ ಗುಡಿಸಲು ತೆರವು ಪ್ರಕರಣ: ಪುನರ್ವಸತಿ ಸಂಬಂಧ ಎರಡು ವಾರಗಳಲ್ಲಿ ನಿರ್ಣಯ - Highcourt latest news

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಘ ಸಂಸ್ಥೆಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Highcourt
Highcourt

By

Published : Oct 1, 2020, 8:51 PM IST

ಬೆಂಗಳೂರು:ನಗರದ ಮಹಾದೇವಪುರ ವಲಯದ ತೂಬರಹಳ್ಳಿ ಮತ್ತು ಕುಂದಲಹಳ್ಳಿಗಳಲ್ಲಿ ವಾಸವಿದ್ದ ಕಾರ್ಮಿಕರ ಜೋಪಡಿಗಳನ್ನು ಬಾಂಗ್ಲಾ ವಲಸಿಗರೆಂದು ಭಾವಿಸಿ ಅಕ್ರಮವಾಗಿ ತೆರವು ಮಾಡಿದ ಪ್ರಕರಣದಲ್ಲಿ ನೆಲೆ ಕಳೆದುಕೊಂಡವರಿಗೆ ನಗರವ್ಯಾಪ್ತಿಯಲ್ಲಿಯೇ ಪುನರ್ವಸತಿ ಕಲ್ಪಿಸುವ ಸಂಬಂಧ ಮುಂದಿನ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಘ ಸಂಸ್ಥೆಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಂಬಂಧ ನಡೆದಿದ್ದ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರ ಕಾರ್ಮಿಕರ ಪುನರ್ವಸತಿ ಕುರಿತು ವರದಿ ನೀಡಿತ್ತು. ವರದಿಯಲ್ಲಿ ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಗುಡ್ಡೇನಹಳ್ಳಿ ಸರ್ವೆ ನಂಬರ್ 23 ರಲ್ಲಿ ಎರಡು ಎಕರೆ ಜಾಗ ಗುರುತಿಸಲಾಗಿದೆ. ಈ ಜಾಗದಲ್ಲಿ 10*10 ಅಳತೆಯ ನಿವೇಶನದಲ್ಲಿ ತಲಾ 29,000 ವೆಚ್ಚದಲ್ಲಿ ಒಂದು ವರ್ಷದ ಮಟ್ಟಿಗೆ 245 ತಾತ್ಕಾಲಿಕ ಶೆಡ್ ನಿರ್ಮಿಸಿ ಕೊಡಲಾಗುತ್ತದೆ. ವರ್ಷದ ಬಳಿಕ ಕಾರ್ಮಿಕರಿಗೆ ಸೂಕ್ತ ನೆಲೆ ಕಂಡುಕೊಳ್ಳಬೇಕು ಎಂದು ಸರ್ಕಾರ ವರದಿಯಲ್ಲಿ ತಿಳಿಸಿತ್ತು. ಆದರೆ, ವರದಿ ತಿರಸ್ಕರಿಸಿದ ನ್ಯಾಯಾಲಯ, ಪುನರ್ವಸತಿಗೆ ಉತ್ತಮ ಯೋಜನೆ ರೂಪಿಸಿಕೊಂಡು ಬರುವಂತೆ ಸರ್ಕಾರಕ್ಕೆ ತಾಕೀತು ಮಾಡಿತ್ತು.

ಇಂದು ನಡೆದ ವಿಚಾರಣೆ ವೇಳೆ, ಸರ್ಕಾರದ ಪರ ವಕೀಲ ವಿಕ್ರಮ ಹುಯಿಲಗೋಳ ಅವರು ಪೀಠಕ್ಕೆ ಮಾಹಿತಿ ನೀಡಿ, ಸದ್ಯ ಇರುವ ಜಾಗದಲ್ಲಿ ಪುನರ್ವಸತಿ ಕಲ್ಪಿಸಬೇಕು ಎಂದು ಕಾರ್ಮಿಕರು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಅದೇ ಜಾಗದಲ್ಲಿ ಪುನರ್ವಸತಿ ಕಲ್ಪಿಸುವ ಸಂಬಂಧ ಜಾಗ ಎಷ್ಟಿದೆ. ಎಷ್ಟು ಮನೆ ನಿರ್ಮಿಸಲು ಸಾಧ್ಯ ಎಂಬ ಕುರಿತು ಪರಿಶೀಲಿಸಬೇಕಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆ. ಅಂತಿಮ ತೀರ್ಮಾನ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಪೀಠ ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ABOUT THE AUTHOR

...view details