ಕರ್ನಾಟಕ

karnataka

ETV Bharat / state

ಕಲಬುರಗಿ, ಹಾವೇರಿಯಲ್ಲಿ ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ: ಡಿ.ಪಿ.ಆರ್. ಸಿದ್ಧಪಡಿಸಲು ಸಿಎಂ ಸೂಚನೆ - ಕಲಬುರಗಿ ರೇಷ್ಮೆ ಗೂಡು ಮಾರುಕಟ್ಟೆ

ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಸಿಎಂ ತಿಳಿಸಿದ್ದಾರೆ.

hitech-silk-market-in-haveri-an-kalaburagi-cm-bommai
ಕಲಬುರಗಿ, ಹಾವೇರಿಯಲ್ಲಿ ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ: ಡಿ.ಪಿ.ಆರ್. ಸಿದ್ಧಪಡಿಸಲು ಸಿಎಂ ಸೂಚನೆ

By

Published : Jun 2, 2022, 10:08 PM IST

ಬೆಂಗಳೂರು:ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.

ರೇಷ್ಮೆ ಇಲಾಖೆ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ವೇಳೆ, ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ತಿಳಿಸಿದರು. ಬೈವೋಲ್ಟೀನ್ ರೇಷ್ಮೆ ಗೂಡಿಗೆ ಪ್ರತಿ ಟನ್​​ಗೆ 10 ಸಾವಿರ ರೂ. ಪ್ರೋತ್ಸಾಹಧನ ಬಿಡುಗಡೆಗೆ ಮಂಜೂರಾತಿ ನೀಡಲಾಗಿದೆ. ಶೀಘ್ರವೇ ಡಿ.ಬಿ.ಟಿ. ಮೂಲಕ ಬಿಡುಗಡೆ ಮಾಡಲಾಗುವುದು ಎಂದರು.

ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ ಶೈತ್ಯಾಗಾರ ನಿರ್ಮಿಸುವ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ರೇಷ್ಮೆ ಬೆಳೆಗಾರರ ಆದಾಯವನ್ನು ಹೆಚ್ಚಿಸಲು ಮತ್ತು ರೇಷ್ಮೆ ಉತ್ಪಾದನೆಯನ್ನು ವೃದ್ಧಿಸಲು ದ್ವಿತಳಿ ಬಿತ್ತನೆ ಗೂಡಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಕೆಜಿಗೆ 50 ರೂ.ಗಳಷ್ಟು ಹೆಚ್ಚಿಸಲು ಮೊದಲ ಕಂತಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ನಾನು ಶಾಲೆಗೆ ಹೋಗುವಾಗ ಪಠ್ಯದಲ್ಲಿ ಶಿವ, ಗಣೇಶನ ಚಿತ್ರವೂ ಇತ್ತು: ಸಚಿವ ಕೋಟಾ ಶ್ರೀನಿವಾಸ್

ABOUT THE AUTHOR

...view details