ಕರ್ನಾಟಕ

karnataka

ETV Bharat / state

ಮತಾಂತರ ನಿಷೇಧ ಕಾಯ್ದೆಯಿಂದ ಧರ್ಮ ಒಡೆಯುವುದಕ್ಕೆ ಕಡಿವಾಣ: ಸಚಿವ ಆರಗ ಜ್ಞಾನೇಂದ್ರ

ಮತಾಂತರ ನಿಷೇಧ ಕಾಯ್ದೆಗೆ ಅಂಗೀಕಾರ. ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಪಾಸ್ ಆಗಿತ್ತು. ಪರಿಷತ್​​ನಲ್ಲಿ ಬಿಲ್ ಮಂಡನೆ ಆಗಿರಲಿಲ್ಲ. ಅದಕ್ಕಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೇವೆ. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

By

Published : Sep 16, 2022, 4:02 PM IST

Updated : Sep 16, 2022, 4:34 PM IST

ಗೃಹ ಸಚಿವ ಆರಗ ಜ್ಞಾನೇಂದ್ರ home minister Aarag Jnanedra
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು:ಮತಾಂತರ ಮೂಲಕ ಧರ್ಮ ಒಡೆಯಲಾಗಿತ್ತು. ಸೇವೆಯ ಹೆಸರಲ್ಲಿ ಮತಾಂತರ ‌ಮಾಡಲಾಗಿತ್ತು. ಈಗ ಮತಾಂತರ ನಿಷೇಧ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಪರಿಷತ್​​ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬಹಳ ಸಂತೋಷದ ವಿಚಾರ ಇದು. ನಿನ್ನೆ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಿದೆ. ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಬಿಲ್ ಪಾಸ್ ಆಗಿತ್ತು. ಪರಿಷತ್​​ನಲ್ಲಿ ಬಿಲ್ ಮಂಡನೆ ಆಗಿರಲಿಲ್ಲ. ಅದಕ್ಕಾಗಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೇವೆ. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಎಂದರು.

ಸಚಿವ ಆರಗ ಜ್ಞಾನೇಂದ್ರ

ಗೋ ಹತ್ಯೆ, ಮತಾಂತರ ಎರಡು‌ ಅಂಗೀಕಾರ ಆಗಿದೆ. ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದು ಹೆಮ್ಮೆ ಆಗುತ್ತಿದೆ. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಿದೆ. ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದು ಕಿಡಿಕಾರಿದರು.

(ಇದನ್ನೂ ಓದಿ: ವಿಧಾನ ಪರಿಷತ್​ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ: ಪ್ರತಿ ಹರಿದು ಕಾಂಗ್ರೆಸ್​ - ಜೆಡಿಎಸ್​ ಸಭಾತ್ಯಾಗ)

Last Updated : Sep 16, 2022, 4:34 PM IST

ABOUT THE AUTHOR

...view details