ಕರ್ನಾಟಕ

karnataka

By

Published : Feb 16, 2022, 12:48 PM IST

ETV Bharat / state

'ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ, ಇಲ್ಲವೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ'

ಹೈಕೋರ್ಟ್ ಆದೇಶ ಮಾನ್ಯ ಮಾಡುವುದು ದೇಶದ ಎಲ್ಲಾ ‌ನಾಗರಿಕರ ಕರ್ತವ್ಯವಾಗಿದೆ. ಕೋರ್ಟ್ ಆದೇಶವನ್ನು ಪಾಲನೆ ಮಾಡಲೇಬೇಕು. ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಗೃಹ ಸಚಿವ
ಗೃಹ ಸಚಿವ

ಬೆಂಗಳೂರು: ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶವನ್ನು ಮಾನ್ಯ ಮಾಡುವುದು ದೇಶದ ಎಲ್ಲಾ ‌ನಾಗರಿಕರ ಕರ್ತವ್ಯ. ಕೋರ್ಟ್ ಆದೇಶವನ್ನು ಪಾಲನೆ ಮಾಡಲೇಬೇಕು. ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಮನಸ್ಸಿಗೆ ನೋವಾಗಬಾರದು. ಮಕ್ಕಳಿಗೆ ಬುದ್ಧಿ ಹೇಳಬಹುದೆಂದು ಇದುವರೆಗೆ ನಮ್ಮ ಆಡಳಿತ ಮಂಡಳಿ, ಪೊಲೀಸ್ ಇಲಾಖೆ ಸ್ವಲ್ಪ ಮೃದು ಧೋರಣೆ ತೋರಿದ್ದಾರೆ.


ಇನ್ಮುಂದೆ ಮೃದು ಧೋರಣೆ ಇಲ್ಲ. ಅದರ ಪರಿಣಾಮವಾಗಿ ಎಲ್ಲಾ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಎಲ್ಲೂ ಗಲಾಟೆ ಆಗಿಲ್ಲ. ಕೆಲ‌ಕಡೆಗಳಲ್ಲಿ ಮಾತ್ರ ರಗಳೆ ಆಗಿದೆ. ಬಳಿಕ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮನವೊಲಿಸಿ ಅವರನ್ನು ಶಾಲೆಗೆ ಕಳುಹಿಸಿದ್ದಾರೆ. ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ ಎಂದರು.

ಇದನ್ನೂ ಓದಿ:ಮಕ್ಕಳ ವಿದ್ಯಾರ್ಜನೆಗೆ ಅವಕಾಶ ಮಾಡಿ‌ಕೊಡಲು ಎಲ್ಲರೂ ಸಹಕರಿಸಬೇಕು: ಸಿಎಂ

ಶಾಂತ ವಾತಾವರಣ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ಶಿವಮೊಗ್ಗದಲ್ಲೂ ಕೂಡ ಯಾವುದೇ ಗಲಾಟೆ ಆಗಿಲ್ಲ. ನಾನು ಡಿಸಿ ಮತ್ತು ಎಸ್ ಪಿ ಜೊತೆಗೆ ಮಾತನಾಡಿದ್ದೇನೆ ಎಂದು ಗೃಹ ಸಚಿವರು ಹೇಳಿದರು.

ABOUT THE AUTHOR

...view details