ಕರ್ನಾಟಕ

karnataka

ETV Bharat / state

ಜನರು ಉತ್ತಮ ಸಹಕಾರ ಕೊಟ್ಟಿದ್ದಾರೆ, ಸಿಬ್ಬಂದಿ ಬೆಳಗ್ಗೆಯಿಂದ ಕೆಲಸ ಮಾಡುತ್ತಿದ್ದಾರೆ: ಬೊಮ್ಮಾಯಿ - ಕೆ.ಆರ್.ಮಾರುಕಟ್ಟೆ ಜಂಕ್ಷನ್

ಸಿಟಿ ಮಾರುಕಟ್ಟೆಗೆ ಆಗಮಿಸಿದ್ದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸಿಟಿ ಮಾರುಕಟ್ಟೆ, ಫ್ಲವರ್ ಮಾರ್ಕೆಟ್, ತರಕಾರಿ ಮಾರ್ಕೆಟ್ ಪರೀಶಿಲನೆ ನಡೆಸಿದರು.

ಗೃಹ ಸಚಿವ ಬೊಮ್ಮಾಯಿ
ಗೃಹ ಸಚಿವ ಬೊಮ್ಮಾಯಿ

By

Published : Apr 24, 2021, 6:40 PM IST

Updated : Apr 24, 2021, 8:29 PM IST

ಬೆಂಗಳೂರು: ಸಿಟಿ ರೌಂಡ್ಸ್ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, ಬೆಳಗ್ಗೆ 10 ಗಂಟೆವರೆಗೂ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಸಮಯ ಇತ್ತು. ನಂತರ ಎಲ್ಲಾ ಕ್ಲೋಸ್ ಆಗಿದೆ. ಜನರು ಉತ್ತಮ ಸಹಕಾರ ಕೊಟ್ಟಿದ್ದಾರೆ, ನಮ್ಮ ಸಿಬ್ಬಂದಿ ಬೆಳಗ್ಗೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಸಿಟಿ ಮಾರುಕಟ್ಟೆಗೆ ಆಗಮಿಸಿದ್ದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸಿಟಿ ಮಾರುಕಟ್ಟೆ, ಫ್ಲವರ್ ಮಾರ್ಕೆಟ್, ತರಕಾರಿ ಮಾರ್ಕೆಟ್ ಪರೀಶಿಲನೆ ನಡೆಸಿದರು. ಗೃಹ ಸಚಿವ ಬೊಮ್ಮಾಯಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಸಾಥ್​ ನೀಡಿದರು.

ಕೆ.ಆರ್.ಮಾರುಕಟ್ಟೆ ಜಂಕ್ಷನ್ ಅತಿ ಮುಖ್ಯ, ಅತಿ ಹೆಚ್ಚು ಜನ ಸೇರುವ ಜಾಗ, ತುಂಬಾ ವ್ಯಾಪಾರ ಆಗುವ ಜಾಗ. ಪಕ್ಕದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕೂಡ ಇದೆ. ನಮ್ಮ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಗೃಹ ಸಚಿವ ಬೊಮ್ಮಾಯಿ

ಸಾರ್ವಜನಿಕರು ಸಹಕಾರ ನೀಡಿದ್ದಾರೆ. 8000 ಜನ ಪೊಲೀಸ್ ಅಧಿಕಾರಿಗಳು ನಗರ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಬೇರೆ ಭಾಗದಲ್ಲಿ ಕೂಡ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಮುಂದುವರೆದು ಮಾತನಾಡಿ, ಪೊಲೀಸ್ ಸಿಬ್ಬಂದಿಗೆ ಕೆಲವು ಕಡೆ ಪಾಸಿಟಿವ್ ಕೇಸ್ ಬಂದಿದೆ. ಬೆಂಗಳೂರಿನಲ್ಲಿ ಪೋಲಿಸ್ ಅಧಿಕಾರಿ, ಸಿಬ್ಬಂದಿಗೆ ಮೂರು ಕೋವಿಡ್ ಕೇರ್ ಸೆಂಟರ್ ಮಾಡಿದ್ದೇವೆ. ನಮ್ಮ ಅಧಿಕಾರಿಗಳ ಜೊತೆಗೆ ಅವರ ಕುಟುಂಬ ಕೂಡ ಮುಖ್ಯ. ಅವರ ಆರೋಗ್ಯ ಕೂಡ ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಇಲ್ಲಿ ವ್ಯಾಪಾರಸ್ಥರು ಬರ್ತಾರೆ, ರಿಟೈಲರ್ಸ್ ಸಹ ಬರ್ತಾರೆ. ನಮ್ಮ ಪೊಲೀಸರು ಬೆಳಗ್ಗೆಯಿಂದ ಇಲ್ಲಿ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ವೀಕೆಂಡ್ ಲಾಕ್​ಡೌನ್ ಯಶಸ್ವಿಯಾಗಿದೆ.

ಬೆಳಗ್ಗೆ ಆರು ಗಂಟೆಯಿಂದಲೇ ನಮ್ಮ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಕೆಆರ್ ಮಾರುಕಟ್ಟೆ ಪಕ್ಕ ವಿಕ್ಟೋರಿಯಾ ಆಸ್ಪತ್ರೆಯಿದೆ. ಕೋವಿಡ್​ಗಾಗಿ ಇರುವ ಅತಿ ದೊಡ್ಡ ಆಸ್ಪತ್ರೆಯಾಗಿದೆ. ಹೀಗಾಗಿ ಇಲ್ಲಿಗೆ ಬಂದು ವೀಕ್ಷಣೆ ಮಾಡಿದ್ದೇನೆ ಎಂದರು.

Last Updated : Apr 24, 2021, 8:29 PM IST

ABOUT THE AUTHOR

...view details