ಕರ್ನಾಟಕ

karnataka

By

Published : Aug 11, 2021, 6:43 PM IST

ETV Bharat / state

ಸಿಎಂ ಬಳಿ ನನಗಾದ ಅನ್ಯಾಯ ತೋಡಿಕೊಂಡಿದ್ದು, ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ: ಆರ್ ಶಂಕರ್​​

ಇಂದು ಸಚಿವ ಸ್ಥಾನ ಸಿಗದೇ ಬೇಸರಗೊಂಡಿರುವ ಮಾಜಿ ಸಚಿವ ಆರ್ ಶಂಕರ್​ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

R Shankar
ಆರ್ ಶಂಕರ್​​

ಬೆಂಗಳೂರು: ಸಿಎಂ ಬೊಮ್ಮಾಯಿ ಭೇಟಿಯಾಗಿ ನನಗೆ ಆಗಿರುವ ಅನ್ಯಾಯ ತೋಡಿಕೊಂಡಿದ್ದೇನೆ. ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಆರ್.ಶಂಕರ್ ಹೇಳಿದರು.

ಮಾಜಿ ಸಚಿವ ಆರ್.ಶಂಕರ್ ಹೇಳಿಕೆ

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನನ್ನನ್ನು ಯಾವುದೇ ಕಾರಣಕ್ಕೂ ಕೈ ಬಿಡಬಾರದು ಎಂದು ಮನವಿ ಮಾಡಿದ್ದೆ. ಇನ್ನೂ ನಾಲ್ಕು ಸ್ಥಾನಗಳಿವೆ. ಮುಂದೆ ವರಿಷ್ಠರ ಗಮನಕ್ಕೆ ತಂದು ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ. ನಾನು ಕೂಡ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುತ್ತೇನೆ. ನಾನು ತ್ಯಾಗ ಮಾಡಿ ಬಂದಿದ್ದೇನೆ. ನನಗೆ ನ್ಯಾಯ ಕೊಡಲೇಬೇಕು ಎಂಬ ಒತ್ತಾಯಿಸಿರುವುದಾಗಿ ಹೇಳಿದರು.

ನಾನು ಸನ್ಯಾಸಿ ಅಲ್ಲ:ಅವತ್ತು ಸರ್ಕಾರ ತರಲಿಕ್ಕೆ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅವತ್ತು ನಾನು ಒಳ್ಳೆಯದು ಮಾಡಿದ್ದಕ್ಕೆ ಇವತ್ತು ನನಗೆ ಹೀಗೆ ಆಗಿದೆ. ನಾನೇನು ಸನ್ಯಾಸಿ ಅಲ್ಲ. ನಮ್ಮಲ್ಲಿ ಒಗ್ಗಟ್ಟು ಇದೆಯೋ, ಇಲ್ವೋ ಎಂಬ ಪ್ರಶ್ನೆ ಬೇಡ. ನಾನಂತೂ ಯಾರ ಪರ, ವಿರುದ್ಧವೂ ಮಾತಾಡಲ್ಲ. ಆದರೆ, ನನ್ನ ತ್ಯಾಗಕ್ಕೆ ಬೆಲೆ ಸಿಗಬೇಕು ಎಂದು ಕೇಳ್ತಿದ್ದೇನೆ ಅಷ್ಟೇ ಎಂದರು.

ಓದಿ: ಶಿಷ್ಯನ ನೆರವಿಗೆ ಧಾವಿಸಿದ BSY : ಖಾತೆ ಅತೃಪ್ತಿ ಶಮನ ಮಾಡುವಲ್ಲಿ ಬೊಮ್ಮಾಯಿ ಸಫಲ

ಇನ್ನಷ್ಟು ಕಾಯುತ್ತೇನೆ:

ನಾನು ಸಚಿವ ಸ್ಥಾನಕ್ಕಾಗಿ ಕಾಯುತ್ತೇನೆ. ವಿಳಂಬ ಮಾಡಬೇಡಿ ಎಂದು ಸಿಎಂಗೆ ಹೇಳಿದ್ದೇನೆ. ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದರೂ ಅಸಮಾಧಾನ ತೋರುತ್ತಿದ್ದಾರೆ. ನನಗೆ ಸಚಿವ ಸ್ಥಾನವೇ ಸಿಕ್ಕಿಲ್ಲ. ನಾನು ಆನಂದ್ ಸಿಂಗ್ ಅವರ ಬಗ್ಗೆ ಈ ಸಂದರ್ಭದಲ್ಲಿ ಮಾತನಾಡಲ್ಲ. ಸರ್ಕಾರ ಬರಲು ನಾನೂ ಸಹ ಕಾರಣ. ನನಗೂ ಸಚಿವ ಸ್ಥಾನ ಕೊಡಿ ಅಂತ ಕೇಳಿದ್ದೇನೆ ಎಂದರು.

ABOUT THE AUTHOR

...view details