ಕರ್ನಾಟಕ

karnataka

ETV Bharat / state

ನಾನೂ‌ ಸಚಿವ ಸ್ಥಾನದ ಆಕಾಂಕ್ಷಿ: ರೇಣುಕಾಚಾರ್ಯ!

ಸಚಿವ ಸ್ಥಾನಕ್ಕೆ ನಾನು ಕೂಡಾ ಆಕಾಂಕ್ಷಿ. ಈಗಾಗಲೇ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ ಇನ್ನೂ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ರೇಣುಕಾಚಾರ್ಯ ಸಚಿವ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

By

Published : Jan 17, 2020, 1:03 PM IST

I want ministerial position : Renukacharya!
ನಾನೂ‌ ಸಚಿವ ಸ್ಥಾನದ ಆಕಾಂಕ್ಷಿ: ರೇಣುಕಾಚಾರ್ಯ!

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಿದ್ದರೂ ತೃಪ್ತರಾಗದ ರೇಣುಕಾಚಾರ್ಯ ಸಚಿವ ಸ್ಥಾನದ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ನಾನೂ‌ ಸಚಿವ ಸ್ಥಾನದ ಆಕಾಂಕ್ಷಿ: ರೇಣುಕಾಚಾರ್ಯ!

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ರೇಣುಕಾಚಾರ್ಯ ಭೇಟಿ ನೀಡಿದರು. ಸಿಎಂ ಯಡಿಯೂರಪ್ಪ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸಚಿವ ಸ್ಥಾನಕ್ಕೆ ನಾನು ಕೂಡಾ ಆಕಾಂಕ್ಷಿ. ಈಗಾಗಲೇ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ ಇನ್ನೂ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಸಿಎಂ ಪರಮಾಧಿಕಾರ. ಕಾಂಗ್ರೆಸ್, ಜೆಡಿಎಸ್​ನಿಂದ ಬಂದು ಗೆದ್ದು ಶಾಸಕರಾದವರಿಗೆ ಸಚಿವ ಸ್ಥಾನ ನೀಡುವ, ಸೋತವರಿಗೂ ಸಚಿವ ಸ್ಥಾನ ನೀಡುವ ನಿರ್ಧಾರ ಸಿಎಂಗೆ ಬಿಟ್ಟದ್ದು. ಅವರ ರಾಜೀನಾಮೆಯಿಂದ ಸರ್ಕಾರ ರಚನೆಯಾಗಿದೆ ಈ ವಿಚಾರದಲ್ಲಿ ಸಿಎಂ ನಿರ್ಧರಿಸಲಿದ್ದಾರೆ ನಾನು ಅದರ ಬಗ್ಗೆ ಏನೂ ಹೇಳಲ್ಲ ಎಂದು ಪ್ರತಿಕ್ರಿಯಿಸಿದರು.

ಇನ್ನೂ ಸಿಎಎ ಹೆಸರಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡ್ತಿದೆ. ಹೀಗಾಗಿ ಸಿಎಎ ಬಗ್ಗೆ ಜಾಗೃತಿ ಮೂಡಿಸಲು ನಾಳೆ ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ ಎಂದರು.

ABOUT THE AUTHOR

...view details