ಬೆಂಗಳೂರು:ನಮ್ಮ ಬೇಡಿಕೆ ಈಡೇರಿಸುವವರೆಗೆ ನಾವು ಸದನದಲ್ಲಿ ಧರಣಿ ಮುಂದುವರೆಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ನ್ಯಾಯಯುತವಾದ ಡಿಮ್ಯಾಂಡ್ ಮಾಡಿದ್ದೇವೆ. ಸಂತ್ರಸ್ತ ಹೆಣ್ಣುಮಗಳಿಗೆ ರಕ್ಷಣೆ ನೀಡಬೇಕು. ಕೂಡಲೇ ಆಕೆಯನ್ನು ಪತ್ತೆ ಹಚ್ಚಿ ಕರೆತರಬೇಕು. ಆಕೆ ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿ ನನ್ನನ್ನು ಬಳಸಿಕೊಂಡ್ರು ಅಂತ ಹೇಳಿದ್ದಾಳೆ. ಸಮ್ಮತಿ ಇಲ್ಲದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಹೀಗಾಗಿ ರಮೇಶ್ ವಿರುದ್ಧ ರೇಪ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದೇನೆ. ಜೊತೆಗೆ ಆರು ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಹೀಗಾಗಿ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಬೇಕು. ಎಸ್ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಎಸ್ಐಟಿಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ನಮಗೆ ಹೆಣ್ಣುಮಗಳಿಗೆ ರಕ್ಷಣೆ ಕೊಡಲಾಗದಿದ್ರೆ ನಾವು ಯಾಕೆ ಅಸೆಂಬ್ಲಿಗೆ ಬರಬೇಕು. ಎಲ್ಲಿ ಹೆಣ್ಣುಮಕ್ಕಳನ್ನ ಪೂಜಿಸ್ತಾರೆ ಅಲ್ಲಿ ಗೌರವ ಹೆಚ್ಚುತ್ತೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದರು.