ಬೆಂಗಳೂರು: 21ಕ್ಕೆ ಸಿಎಲ್ಪಿ ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಲ್ಲಿ ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸಾಮೂಹಿಕ ನಾಯಕತ್ವದಡಿ ಉಪಚುನಾವಣೆ ಎದುರಿಸುವ ಬಗ್ಗೆ ಮುನಿಯಪ್ಪ ಹೇಳಿದ್ರು ಈ ಮಾತು!
ರಾಜ್ಯದಲ್ಲಿನ ಉಪಚುನಾವಣೆ ಎದುರಿಸುವ ಬಗ್ಗೆ ಮಾತನಾಡಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸಾಮೂಹಿಕ ನಾಯಕತ್ವದಡಿ ಎಲ್ಲ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಕೆ.ಎಚ್.ಮುನಿಯಪ್ಪ
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಲ್ಪಿ ನಾಯಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಈ ವಿಚಾರಗಳನ್ನು ನಾನು ಪ್ರಸ್ತಾಪಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.