ಕರ್ನಾಟಕ

karnataka

ETV Bharat / state

ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕಿದ್ದ ಚರ್ಚೆಯನ್ನು ಈಶ್ವರಪ್ಪ ಬಹಿರಂಗಪಡಿಸಿದ್ದು ಸಲ್ಲದು: ರೇಣುಕಾಚಾರ್ಯ - ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯಪಾಲ ವಜುಭಾಯ್ ವಾಲಾ ಸೇರಿದಂತೆ ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ. ಈಶ್ವರಪ್ಪ ಅವರ ಈ ನಡೆಯನ್ನು ಶಾಸಕ ರೇಣುಕಾಚಾರ್ಯ ಖಂಡಿಸಿದ್ದಾರೆ.

MLA Renukaacharya
ಶಾಸಕ ಎಂ.ಪಿ. ರೇಣುಕಾಚಾರ್ಯ

By

Published : Apr 1, 2021, 2:17 PM IST

ಬೆಂಗಳೂರು: ಕೆ.ಎಸ್. ಈಶ್ವರಪ್ಪ ಅವರಂತಹ ಹಿರಿಯ ಸಚಿವರೇ ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ?. ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ

ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಹೀಗೆ ಮಾಡಿರುವುದರಿಂದ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲವೇ? ಪಕ್ಷದ ಇಮೇಜ್ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ನಾವು 60 ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ? ಈ ಮೊದಲು ಈಶ್ವರಪ್ಪ ಅವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು ಆದರೆ, ಅವರು ಸ್ಪಂದಿಸಿರಲಿಲ್ಲ. ಹೀಗಾಗಿ ವಿಧಿಯಿಲ್ಲದೆ ಸಿಎಂ ಅವರನ್ನು ಭೇಟಿ ಮಾಡಬೇಕಾಯಿತು ಎಂದು ಹೇಳಿದರು.

ಓದಿ:ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ: ಈಶ್ವರಪ್ಪ ನಡೆಗೆ ಅರುಣ್ ಸಿಂಗ್ ಅಸಮಾಧಾನ

ABOUT THE AUTHOR

...view details