ಕರ್ನಾಟಕ

karnataka

ಕಾಂಗ್ರೆಸ್​ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಹೆಚ್ಚುತ್ತಿದೆ ಒತ್ತಡ; ದೊಡ್ಡ ಮಟ್ಟದ ಲಾಬಿ ಆರಂಭ

By

Published : May 21, 2023, 5:16 PM IST

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಂಟು ಮಂದಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ನಡೆಯಿತು. ಆದರೆ ಅವಕಾಶ ಸಿಗದ ಬಹಳಷ್ಟು ಅತೃಪ್ತ ಶಾಸಕರು ಈ ಸಮಾರಂಭಕ್ಕೆ ಗೈರಾಗಿದ್ದರು.

DCM DK Sivakumar, CM Siddaramaiah, M.B. Patil
ಡಿ ಸಿ ಎಂ ಡಿ ಕೆ ಶಿವಕುಮಾರ್,ಸಿ ಎಂ ಸಿದ್ದರಾಮಯ್ಯ,ಎಂ.ಬಿ. ಪಾಟೀಲ್

ಬೆಂಗಳೂರು:ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ 24 ಸಚಿವ ಸ್ಥಾನಗಳಿಗೆ 80ಕ್ಕೂ ಹೆಚ್ಚು ಶಾಸಕರಿಂದ ಲಾಬಿ ಆರಂಭವಾಗಿದೆ. ದಿನಕ್ಕೊಬ್ಬರು ಸಿ ಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಹೈಕಮಾಂಡ್ ನಾಯಕರ ಮನೆ ಮುಂದೆ ತಮ್ಮದೇ ಆದ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ.

ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಲ್ಲಿ ಪ್ರಮುಖರಲ್ಲಿ ಸದ್ಯ ಕೆ ಜೆ ಜಾರ್ಜ್, ಎಂ. ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ. ಆದರೆ ಪಟ್ಟಿ ಇನ್ನೂ ದೊಡ್ಡದಿದೆ. ಎಚ್. ಸಿ. ಮಹದೇವಪ್ಪ, ಬಸವರಾಜ ರಾಯರೆಡ್ಡಿ, ದಿನೇಶ್ ಗುಂಡೂರಾವ್, ಈ ತುಕಾರಾಂ, ರಹೀಮ್ ಖಾನ್, ಎಸ್ ಎಸ್ ಮಲ್ಲಿಕಾರ್ಜುನ, ಕೆ ಎಂ. ಶಿವಲಿಂಗೇಗೌಡ, ಈಶ್ವರ ಖಂಡ್ರೆ, ಅಜಯ್ ಸಿಂಗ್, ಕೃಷ್ಣ ಬೈರೇಗೌಡ, ವಿನಯ್ ಕುಲಕರ್ಣಿ, ಯು. ಟಿ. ಖಾದರ್, ಸಂತೋಷ್ ಲಾಡ್, ವಿಜಯಾನಂದ ಕಾಶಪ್ಪನವರ್, ಕೆ. ಎನ್. ರಾಜಣ್ಣ, ಶಾಮನೂರು ಶಿವಶಂಕರಪ್ಪ , ಎಂ ಕೃಷ್ಣಪ್ಪ, ಕೆ ಎನ್‍ ರಾಜಣ್ಣ, ಶಿವರಾ ತಂಗಡಗಿ, ಶ್ರೀನಿವಾಸ್ ಮಾನೆ, ರಿಜ್ವಾನ್ ಅರ್ಷದ್, ಎಚ್‍.ವೈ. ಮೇಟಿ ಇದ್ದಾರೆ.

ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಲ್ಲಿ ಪ್ರಮುಖರೆಂದರೆ, ಲಕ್ಷ್ಮಿ ಹೆಬ್ಬಾಳ್ಕರ್, ತನ್ವೀರ್ ಸೇಠ್, ಮಧು ಬಂಗಾರಪ್ಪ, ಕುಣಿಗಲ್ ರಂಗನಾಥ್, ಸಲೀಂ ಅಹ್ಮದ್, ಎನ್. ಎ. ಹ್ಯಾರೀಸ್ ಹಾಗೂ ಪೊನ್ನಣ್ಣ ಇದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಬೀರುತ್ತಿರುವವರಲ್ಲಿ ಡಾ ಜಿ ಪರಮೇಶ್ವರ್, ಕೆ ಎಚ್ ಮುನಿಯಪ್ಪ, ರಾಮಲಿಂಗ ರೆಡ್ಡಿ ಹಾಗೂ ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದಾರೆ. ಉಳಿದಂತೆ ಬಿ. ಕೆ. ಹರಿಪ್ರಸಾದ್, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಕಾಯುತ್ತಿದ್ದಾರೆ.

ವಿಪರ್ಯಾಸ ಅಂದ್ರೆ ರಾಜ್ಯದಲ್ಲಿ ಮತದಾರರು ಈ ಬಾರಿ ಕಾಂಗ್ರೆಸ್​ಗೆ ನಿರೀಕ್ಷೆಗೂ ಮೀರಿದ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಈ ಬಾರಿ 70 ವರ್ಷ ಮೀರಿದ 8 ರಿಂದ 10 ಶಾಸಕರು ಇದ್ದಾರೆ. ಇವರೆಲ್ಲರೂ ನಾಲ್ಕರಿಂದ ಐದು ಬಾರಿ ಶಾಸಕರಾಗಿ ಆಯ್ಕೆ ಆದವರು. ಜೊತೆಗೆ ಹಲವು ಶಾಸಕರು ಈ ಹಿಂದೆ ಮಂತ್ರಿಯಾಗಿ ಕೆಲಸ ಮಾಡಿದ ಅನುಭವ ಇರುವವರು. ಹೀಗಾಗಿ, ಸಹಜವಾಗಿ ಈ ಹಿರಿತಲೆಗಳು ಸಚಿವ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಇದೇ ರೀತಿ ಯುವ ಶಾಸಕರೂ ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ. ಒಟ್ಟಾರೆ ಇವರ ಲಾಬಿಗೆ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಯಾವ ವಿಧದ ಪರಿಹಾರ ಕಂಡುಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕು.

ಪದಗ್ರಹಣದಿಂದಲೂ ದೂರ..ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯ ಮತ್ತು ಎಂಟು ಮಂದಿ ಸಚಿವರ ಪದಗ್ರಹಣ ಸಮಾರಂಭ ನಿನ್ನೆ ನೆರವೇರಿದ್ದು, ಅವಕಾಶ ಸಿಗದ ಅತೃಪ್ತ ಶಾಸಕರು ಸಮಾರಂಭದಿಂದ ದೂರವೇ ಉಳಿದಿದ್ದರು. ಮಾಜಿ ಸಚಿವ ದಿನೇಶ್ ಗುಂಡೂರಾವ್, ಬಸವರಾಜ ರಾಯರೆಡ್ಡಿ, ಸಂತೋಷ್ ಲಾಡ್ ಕಾಣಲಿಲ್ಲ. ಕೆ. ಎನ್ ರಾಜಣ್ಣ, ಭೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ತುಕಾರಾಮ್, ರಿಜ್ವಾನ್ ಅರ್ಷದ್, ಮಧು ಬಂಗಾರಪ್ಪ ಸೇರಿ ಹಲವು ಶಾಸಕರು ಕಾರ್ಯಕ್ರಮ ವೇದಿಕೆಯಲ್ಲಿ ಕಂಡುಬರಲಿಲ್ಲ.

ಇದನ್ನೂಓದಿ:'ಅಧಿಕಾರಕ್ಕಾಗಿ ನನ್ನ ಮನೆ, ಸಿದ್ದರಾಮಯ್ಯರ ಮನೆ ಎಂದು ಸುತ್ತಬೇಡಿ': ಡಿಕೆಶಿ ಖಡಕ್ ಸೂಚನೆ

ABOUT THE AUTHOR

...view details