ಕರ್ನಾಟಕ

karnataka

ETV Bharat / state

ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ತನಿಖೆಗೆ ಆದೇಶ

ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

By

Published : Jun 7, 2023, 8:37 PM IST

Updated : Jun 7, 2023, 10:53 PM IST

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿದ್ದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವರ್ಷ ಜುಲೈ 23 ಮತ್ತು 24 ರಂದು ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಸಲ್ಲಿಸಿದ್ದ ದೂರುಗಳನ್ನು ಆಧರಿಸಿ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ (ಸಿಎಸ್) ಗೆ ಸೂಚನೆ ನೀಡಿದ್ದಾರೆ.

ತನಿಖೆಗೆ ಆದೇಶ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಲಾಗಿದ್ದ 3 ಸಾವಿರ ಕೋಟಿ ರೂ. ಅನುದಾನವನ್ನು ದುರ್ಬಳಕೆ ಮಾಡಲಾಗಿದೆ ಎಂಬ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸಿದ್ದರಾಮಯ್ಯ ಇಲಾಖಾ ತನಿಖೆಗೆ ಆದೇಶಿಸಿದ್ದರು.

ಪಿಎಸ್​ಐ ಹಗರಣ:ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೆಲವರು ಪಿಎಸ್​ಐ ಹಗರಣದಲ್ಲಿ ನನ್ನ ಹೆಸರನ್ನೂ ಸಹ ತೇಲಿಬಿಟ್ಟಿದ್ದರು. ಅಂದು ವಿರೋಧ ಪಕ್ಷ ಕಾಂಗ್ರೆಸ್ ಪಿಎಸ್​ಐ ಹಗರಣದ ಬಗ್ಗೆ ಭಾರಿ ಸದ್ದು ಮಾಡಿತ್ತು.​ ಇದೀಗ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರ ಹಿಡಿದಿದೆ. ಹೀಗಾಗಿ ಪಿಎಸ್​ಐ ಹಗರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಹೇಳಿದ್ದರು.

ಇದನ್ನೂ ಓದಿ :ಪಿಎಸ್​ಐ ಹಗರಣದ ಬಗ್ಗೆ ಸಮಗ್ರ ತನಿಖೆ ಮಾಡಲಿ: ಶಾಸಕ ಬಿ.ವೈ.ವಿಜಯೇಂದ್ರ

ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್ಸ್​ಪೆಕ್ಟರ್ ನೇಮಕಾತಿ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಮೃತ್ ಪೌಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೇಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ :ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಡಾ. ಫಾರೂಕ್ ಅಬ್ದುಲ್ಲಾ

Last Updated : Jun 7, 2023, 10:53 PM IST

ABOUT THE AUTHOR

...view details