ಕರ್ನಾಟಕ

karnataka

ETV Bharat / state

ಇಂದು ಸಂಜೆ ಜೆಡಿಎಸ್​​​ ಶಾಸಕರು ರೆಸಾರ್ಟ್​ಗೆ ಶಿಫ್ಟ್​​​ - undefined

ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ಮಡಿಕೇರಿ ಸೋಮವಾರಪೇಟೆ ತಾಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್​ಗೆ ಜೆಡಿಎಸ್​​​ನ ಎಲ್ಲಾ ಶಾಸಕರನ್ನು ಇಂದು ಕರೆದೊಯ್ಯಲು ಸಿಎಂ ತೀರ್ಮಾನಿಸಿದ್ದಾರೆ.

ಜೆಡಿಎಸ್ ಶಾಸಕರು ಮತ್ತು ಸಿಎಂ ಭೇಟಿ

By

Published : Jul 8, 2019, 5:56 PM IST

ಬೆಂಗಳೂರು: ಮಡಿಕೇರಿ ಸೋಮವಾರಪೇಟೆ ತಾಲೂಕಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್​ಗೆ ಜೆಡಿಎಸ್​​​ನ ಎಲ್ಲಾ ಶಾಸಕರನ್ನು ಕರೆದೊಯ್ದು ಚರ್ಚೆ ನಡೆಸಲು ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

ಆಪರೇಷನ್ ಬಿಜೆಪಿ ಭೀತಿ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಹಿಡಿದಿಟ್ಡುಕೊಳ್ಳುವ ಉದ್ದೇಶದಿಂದ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ, ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಗೌಡರ ಜೊತೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂದು ಸಂಜೆ ಜೆಡಿಎಸ್ ಶಾಸಕರು ರೆಸಾರ್ಟ್​ಗೆ ಶಿಫ್ಟ್

ಈಗಾಗಲೇ ರೆಸಾರ್ಟ್​ನಲ್ಲಿ ರೂಮ್ ಬುಕ್ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ ವೇಳೆಗೆ ಎಲ್ಲಾ ಜೆಡಿಎಸ್ ಶಾಸಕರು ರೆಸಾರ್ಟ್ ತಲುಪಲಿದ್ದಾರೆ.

ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಜೆಡಿಎಸ್ ಸಚಿವರು, ಶಾಸಕರು ನಿರ್ಧರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details