ಕರ್ನಾಟಕ

karnataka

ETV Bharat / state

ಅಧಿವೇಶನಕ್ಕೆ ರೆಸಾರ್ಟ್​ನಿಂದಲೇ ತೆರಳಲಿರುವ ಜೆಡಿಎಸ್ ಶಾಸಕರು

ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಖಾಸಗಿ ಸೆಕ್ಯೂರಿಟಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

By

Published : Jul 12, 2019, 8:57 AM IST

ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್

ಬೆಂಗಳೂರು:ಜೆಡಿಎಸ್ ಶಾಸಕರ ರೆಸಾರ್ಟ್ ವಾಸ್ತವ್ಯ ನಾಲ್ಕನೇ ದಿನಕ್ಕೆ ತಲುಪಿದ್ದು, ಇಂದು ನಡೆಯುವ ವಿಧಾನಮಂಡಲ ಅಧಿವೇಶನಕ್ಕೆ ರೆಸಾರ್ಟ್​ನಿಂದಲೇ ಜೆಡಿಎಸ್ ಶಾಸಕರು ಭಾಗಿಯಾಗಲಿದ್ದಾರೆ.

ಹೀಗಾಗಿ ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಹಾಗೂ ಖಾಸಗಿ ಸೆಕ್ಯೂರಿಟಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್

ರೆಸಾರ್ಟ್​ಗೆ ಖಾಸಗಿ ಬಸ್ ಆಗಮಿಸಿದ್ದು, 9 ಗಂಟೆ ನಂತರ ಈ ಬಸ್​​ನಲ್ಲಿ ಜೆಡಿಎಸ್ ಶಾಸಕರು ಒಟ್ಟಾಗಿ ಅಧಿವೇಶನಕ್ಕೆ ತೆರಳುತ್ತಾರೆ. ಸಚಿವ ಬಂಡೆಪ್ಪ ಕಾಶಂಪುರ್ ನೇತೃತ್ವದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ABOUT THE AUTHOR

...view details