ಕರ್ನಾಟಕ

karnataka

ETV Bharat / state

ಸಾ.ರಾ.ಮಹೇಶ್​ ಬಿಜೆಪಿ ನಾಯಕರ ಭೇಟಿ ವಿಚಾರ: ಸ್ಪಷ್ಟನೆ ನೀಡಿದ ಜೆಡಿಎಸ್​​,ಬಿಜೆಪಿ

ಕುಮಾರಕೃಪ ಅತಿಥಿ ಗೃಹದಲ್ಲಿ ಸಚಿವ ಸಾ.ರಾ.ಮಹೇಶ್ ಬಿಜೆಪಿ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂಬ ವಿಚಾರದ ಕುರಿತು ಜೆಡಿಎಸ್ ಪಕ್ಷ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್​​ ರಾವ್ ಟ್ವೀಟ್ ಮಾಡುವ ಮೂಲಕ ಸ್ಫಷ್ಟನೆ ನೀಡಲಾಗಿದೆ.

By

Published : Jul 11, 2019, 11:45 PM IST

Updated : Jul 11, 2019, 11:55 PM IST

ಬೆಂಗಳೂರು

ಬೆಂಗಳೂರು:ಕುಮಾರಕೃಪ ಅತಿಥಿ ಗೃಹದಲ್ಲಿ ಸಚಿವ ಸಾ.ರಾ.ಮಹೇಶ್ ಬಿಜೆಪಿ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂಬ ವಿಚಾರದ ಕುರಿತು ಜೆಡಿಎಸ್ ಪಕ್ಷ ಟ್ವೀಟ್​ ಮಾಡಿದ್ದು, ಆಕಸ್ಮಿಕವಾಗಿ ಭೇಟಿ ಮಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದೆ.

ಕುಮಾರಕೃಪ ಅತಿಥಿ ಗೃಹಕ್ಕೆ ಶಾಸಕರು, ಮಂತ್ರಿಗಳು ವಿಶ್ರಾಂತಿ ಪಡೆಯಲು ಹೋಗುವುದು ಸಹಜ. ಇದೇ ವೇಳೆ ಸಚಿವ ಸಾ.ರಾ.ಮಹೇಶ್ ಅವರು ಆಕಸ್ಮಿಕವಾಗಿ ಈಶ್ವರಪ್ಪ, ಮುರಳೀಧರ ರಾವ್ ಅವರನ್ನು ದಾರಿ ಮಧ್ಯೆ ಭೇಟಿಯಾಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮೈತ್ರಿ ಪಕ್ಷ ಸದೃಢವಾಗಿದ್ದು, ಸಮರ್ಥ ಆಡಳಿತ ಮುಂದುವರೆಸಲಿದೆ ಎಂದು ಟ್ವೀಟ್​​ನಲ್ಲಿ ಪಕ್ಷ ತಿಳಿಸಿದೆ.

ಮಹೇಶ್​ ಬಿಜೆಪಿ ನಾಯಕರ ಭೇಟಿ ವಿಚಾರ: ಸ್ಪಷ್ಟನೆ ನೀಡಿದ ಮುರುಳೀಧರ್​ ರಾವ್
ಜೆಡಿಎಸ್ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ. ಅಂತಹ ಯಾವ ಕೆಲಸವನ್ನು ನಾವು ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್​​ ರಾವ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಮಹೇಶ್ ಅವರನ್ನು ಭೇಟಿ ಮಾಡಿದ್ದು ಕೇವಲ ಕಾಕತಾಳೀಯ ಮಾತ್ರ. ಅದನ್ನು‌ ವಿವಾದಾತ್ಮಕಗೊಳಿಸುವುದು ಬೇಡ ಎಂದು ಟ್ವೀಟ್ ಮಾಡುವ ಮೂಲಕ ಮಾಧ್ಯಮಗಳಲ್ಲಿ ಬರುತ್ತಿರುವ‌ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

Last Updated : Jul 11, 2019, 11:55 PM IST

For All Latest Updates

TAGGED:

ABOUT THE AUTHOR

...view details