ಕರ್ನಾಟಕ

karnataka

ETV Bharat / state

14 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ... ಸಂಜೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ - JDS leader krishna reddy pressmeet

ಉಪಚುನಾವಣೆ ಘೋಷಣೆಯಾದ ರಾಜ್ಯದ 16 ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಸಂಜೆ 14 ಕ್ಷೇತ್ರಗಳಿಗೆ ಜೆಡಿಎಸ್​ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ಮುಖಂಡ ಎಂ. ಕೃಷ್ಣಾರೆಡ್ಡಿ ಹೇಳಿದರು.

14 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ

By

Published : Nov 16, 2019, 2:02 PM IST

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರ ಒಂದನ್ನು ಹೊರತುಪಡಿಸಿ ಉಳಿದ ಎಲ್ಲ 14 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ‌‌‌‌ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಹೇಳಿದರು.

ಜೆಡಿಎಸ್ ಮುಖಂಡ ಎಂ. ಕೃಷ್ಣಾರೆಡ್ಡಿ ಸುದ್ದಿಗೋಷ್ಠಿ

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ವರಿಷ್ಠರು ಪ್ರಕಟಿಸಲಿದ್ದಾರೆ. ನಮ್ಮ ಪಕ್ಷದಿಂದ ಅನರ್ಹರಾಗಿರುವ ಶಾಸಕರ ಮೂರೂ ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ‌. ನಮ್ಮ ಕ್ಷೇತ್ರಗಳನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಉಪಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ವರಿಷ್ಠರು ಜವಾಬ್ದಾರಿ ವಹಿಸಬಹುದು. ನಮ್ಮ ವರಿಷ್ಠರು ಯಾವುದೇ ಕ್ಷೇತ್ರ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದರು.

ಶಿವಾಜಿನಗರ ಕ್ಷೇತ್ರದಿಂದ ರೋಷನ್ ಬೇಗ್ ಜೆಡಿಎಸ್ ಟಿಕೆಟ್ ಕೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕ್ಷೇತ್ರವೂ ಸೇರಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ವರಿಷ್ಠರು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details