ಕರ್ನಾಟಕ

karnataka

By

Published : Sep 17, 2019, 2:31 AM IST

ETV Bharat / state

ಸುಗಮ ಸಂಚಾರಕ್ಕೆ ಶಿವಾನಂದ ವೃತ್ತದಲ್ಲಿ ಏಕಮುಖ ಸಂಚಾರ ಜಾರಿ: ರವಿಕಾಂತೇಗೌಡ ಸ್ಪಷ್ಟನೆ

ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾಧವ ನಗರದ ಯಮುನಾಬಾಯಿ ರಸ್ತೆಯು 30 ಅಡಿ ಇದ್ದು, ಸದ್ಯ ಮಾರ್ಗದಲ್ಲಿ ಉಂಟಾಗುತ್ತಿರುವ ಸಂಚಾರ ಸಮಸ್ಯೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.

ರವಿಕಾಂತೇಗೌಡ

ಬೆಂಗಳೂರು:ರಾಜಕೀಯ ನಾಯಕರ ಒತ್ತಡಕ್ಕೆ ಮಣಿದು ರಾತ್ರೋರಾತ್ರಿ ಶಿವಾನಂದ ವೃತ್ತದ ಯಮುನಾಬಾಯಿ ರಸ್ತೆಯನ್ನು ಏಕಮುಖ ಸಂಚಾರ ಮಾಡಿರುವ ಆರೋಪ ಬೆನ್ನಲೇ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಬೆಳವಣಿಗೆ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾಧವ ನಗರದ ಯಮುನಾಬಾಯಿ ರಸ್ತೆಯು 30 ಅಡಿ ಇದ್ದು, ರಸ್ತೆಯ ಎರಡೂ ಬದಿಗಳಲ್ಲಿ ಜನರು ವಾಹನಗಳ ನಿಲುಗಡೆ ಮಾಡುತ್ತಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಆಗುತ್ತಿರುವುದರಿಂದ ತೊಂದರೆಯನ್ನು ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಮಾಧವ ನಗರ ವ್ಯಾಪ್ತಿಯ ಸಾರ್ವಜನಿಕರ ನೀಡಿದ ದೂರು ನೀಡಿದ್ದರು.

ಸದ್ಯ ಇದರಂತೆ ಈ ರಸ್ತೆಯಲ್ಲಿ ವಾಹನ ಸಂಚಾರ ಸಮಸ್ಯೆ ಪರಿಹಾರಕ್ಕೆ ಅಲ್ಲಿನ‌ ಸಮಸ್ಯೆಗಳ ಬಗ್ಗೆ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಖುದ್ದಾಗಿ ಸಮೀಕ್ಷೆ ನಡೆಸಿ ಈ ರಸ್ತೆಯಲ್ಲಿ ಉಂಟಾಗುತ್ತಿರುವ ಸಂಚಾರ ಸಮಸ್ಯೆ ಬಗ್ಗೆ ಮಾಧವ ನಗರ 2ನೇ ಅಡ್ಡರಸ್ತೆಯಿಂದ ಹರೇ ಕೃಷ್ಣ ರಸ್ತೆಯವರೆಗೆ ಏಕ ಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಸುಗಮ ಸಂಚಾರ ವ್ಯವಸ್ಥೆ ಅನುವು ಮಾಡಿಕೊಡಲು ಶಿಫಾರಸ್ಸು ಮಾಡಿ ವರದಿ ನೀಡಿದ್ದರು.

ಪತ್ರಿಕಾ ಪ್ರಕಟಣೆ

ವರದಿಯನ್ನು ಸಂಚಾರ ವಿಭಾಗದ ಡಿಸಿಪಿ‌ ಅನುಮೋದಿಸಿ ನಗರ ಪೊಲೀಸ್ ಆಯುಕ್ತರಿಗೆ 10 ದಿನಗಳ ಹಿಂದೆಯೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಗಣಿಸಿ ಕಲಂ 115 ಮೋಟಾರ್ ವಾಹನ ಕಾಯ್ದೆ-1988 ಹಾಗೂ ಕಲಂ 3 ಕರ್ನಾಟಕ‌ ಟ್ರಾಫಿಕ್ ಕಂಟ್ರೋಲ್ ಕಾಯ್ದೆ 1960ರ ಅನ್ವಯ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕಳೆದ ತಿಂಗಳು 26ರಿಂದ ಜಾರಿ ಬರಬೇಕೆಂದು ಅಧಿಸೂಚನೆ ಹೊರಡಿಸಿದ್ದರು. ಈ ಮಾರ್ಗಕ್ಕೆ ಪರ್ಯಾಯ ಮಾರ್ಗವಾಗಿ ವಿರುದ್ಧ ದಿಕ್ಕಿನಲ್ಲಿ ಯಾವ ಕಾಲೇಜ್ ರಸ್ತೆ ಮೂಲಕ ಸಂಚರಿಸಲು ಸಂಚಾರ‌ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗೂ ಏಕಮುಖ ಸಂಚಾರ ವ್ಯವಸ್ಥೆಯನ್ನು ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಲಾಗಿದೆ‌ ಎಂದು ಸ್ಪಷ್ಟನೆ ನೀಡಿದ್ದಾರೆ.

ABOUT THE AUTHOR

...view details