ಕರ್ನಾಟಕ

karnataka

By

Published : Jun 16, 2022, 5:48 PM IST

ETV Bharat / state

ಕಿಡಿಗೇಡಿ ಪ್ರೇಮಿಯಿಂದ ಆ್ಯಸಿಡ್‌ ದಾಳಿಗೆ ತುತ್ತಾದ ಯುವತಿಗೆ ಪೊಲೀಸರಿಂದ ರಕ್ತದಾನ

ಸುಂಕದಕಟ್ಟೆಯಲ್ಲಿ ಕಿಡಿಗೇಡಿ ಪ್ರೇಮಿಯೊಬ್ಬನಿಂದ ಆ್ಯಸಿಡ್ ದಾಳಿಗೊಳಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿರುವ ಯುವತಿಗೆ ಇತ್ತೀಚಿಗೆ ಸರ್ಜರಿಯಾಗಿದ್ದು, ರಕ್ತದ ಅವಶ್ಯಕತೆ ಇತ್ತು. ಇದೀಗ ಪೊಲೀಸರೇ ರಕ್ತದಾನ ಮಾಡಿದ್ದಾರೆ.

ಆ್ಯಸಿಡ್ ಸಂತ್ರಸ್ತೆಗೆ ರಕ್ತದಾನ ಮಾಡಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು
ಆ್ಯಸಿಡ್ ಸಂತ್ರಸ್ತೆಗೆ ರಕ್ತದಾನ ಮಾಡಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು

ಬೆಂಗಳೂರು: ಆ್ಯಸಿಡ್ ಸಂತ್ರಸ್ತ ಯುವತಿಯ ಸರ್ಜರಿಗೆ ನೆರವಾಗುವ ಮೂಲಕ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಮಾದರಿಯಾಗಿದ್ದಾರೆ‌. ಸುಂಕದಕಟ್ಟೆಯಲ್ಲಿ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿರುವ ಯುವತಿಗೆ ಇತ್ತೀಚಿಗೆ ಸರ್ಜರಿಯಾಗಿದ್ದು, ರಕ್ತದ ಅವಶ್ಯಕತೆ ಇತ್ತು.

ಈ ಬಗ್ಗೆ ವಿಷಯ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಐದು ಯೂನಿಟ್ ರಕ್ತದಾನ ಮಾಡಿದರು. ಇನ್​ಸ್ಪೆಕ್ಟರ್ ಪ್ರಶಾಂತ್ ಸೇರಿದಂತೆ ಐವರು ಸಿಬ್ಬಂದಿ ರಕ್ತದಾನ ಮಾಡಿದ್ದು, ಪ್ರಶಂಸೆಗೆ ಕಾರಣವಾಗಿದೆ.


ಏಪ್ರಿಲ್ 28ರಂದು ಸುಂಕದಕಟ್ಟೆಯ ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪನಿಯ ಸಮೀಪ ಯುವತಿಯ ಮೇಲೆ ಆ್ಯಸಿಡ್ ದಾಳಿ‌ ನಡೆದಿತ್ತು.

ಇದನ್ನೂ ಓದಿ: ದ.ಪದವೀಧರ ಕ್ಷೇತ್ರ: ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಜಯಭೇರಿ

For All Latest Updates

TAGGED:

ABOUT THE AUTHOR

...view details