ಕರ್ನಾಟಕ

karnataka

ETV Bharat / state

ಬಸ್ ನಿಲ್ದಾಣಗಳಲ್ಲಿ ಕನ್ನಡದ ಕವಿ-ಕಾವ್ಯಗಳನ್ನು ಪರಿಚಯಿಸಿ ; ಬಿಎಂಟಿಸಿಗೆ 'ಕಅಪ್ರಾ' ಸಲಹೆ..‌ - Kannada Development Authority sugest to BMTC

ವಿದ್ಯುನ್ಮಾನ ಫಲಕಗಳಲ್ಲಿ ಪ್ರಕಟವಾಗುವ ಮಾಹಿತಿಗಳು ಪ್ರಧಾನವಾಗಿ ಕನ್ನಡದಲ್ಲಿರುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಸಂಸ್ಥೆಯಲ್ಲಿ ಬಳಕೆಯಾಗುತ್ತಿರುವ ತಂತ್ರಾಂಶಗಳಲ್ಲಿ ಸೆಪ್ಟೆಂಬರ್ ಒಳಗೆ ಕನ್ನಡದಲ್ಲಿಯೂ ಮಾಹಿತಿ ಲಭಿಸುವಂತೆ ಅಗತ್ಯಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು..

ಡಾ. ಟಿ. ಎಸ್ ನಾಗಾಭರಣ
ಡಾ. ಟಿ. ಎಸ್ ನಾಗಾಭರಣ

By

Published : May 25, 2022, 5:32 PM IST

ಬೆಂಗಳೂರು :ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಟಿ ಎಸ್ ನಾಗಾಭರಣ ಮಾತನಾಡಿ, ಸಾರಿಗೆ ಸಂಸ್ಥೆಗಳ ಪೈಕಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಸಂಸ್ಥೆಗಳಲ್ಲಿ ಬಿಎಂಟಿಸಿ ಒಂದು.

ಅಲ್ಲದೇ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಗಣ್ಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಬೆಂಮಸಾಸಂನೀಡುವ ನೃಪತುಂಗ ಪ್ರಶಸ್ತಿಯೂ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಇದಕ್ಕಾಗಿ ಅಖಂಡ ಕನ್ನಡಿಗರ ಪರವಾಗಿ ಪ್ರಾಧಿಕಾರ ಅಧಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಹೇಳಿದರು. ಬೆಂಗಳೂರಿನಂತಹ ಮೆಟ್ರೋಪಾಲಿಟನ್ ನಗರಗಳಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವುದಕ್ಕೆ ಸಾರಿಗೆ ಸಂಸ್ಥೆಗಳ ಕೊಡುಗೆ ಪ್ರಮುಖವಾಗಿದೆ.

ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವ ಕನ್ನಡೇತರರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಿ, ಅವರುಗಳಿಗೆ ಕನ್ನಡವನ್ನು ಕಲಿಯುವ ಅನಿವಾರ್ಯವನ್ನು, ಕನ್ನಡದ ಮೇಲಿನ ಪ್ರೀತಿಯನ್ನುಂಟು ಮಾಡುವಲ್ಲಿ ಸಾರಿಗೆ ಇಲಾಖೆಯ ಸಿಬ್ಬಂದಿಯಿರುವುದು ಶ್ಲಾಘನೀಯ ಎಂದು ತಿಳಿಸಿದರು. ಚಾಲಕರು ಮತ್ತು ನಿರ್ವಾಹಕರ ಎದೆಬಿಲ್ಲೆ ಮತ್ತು ಭುಜಬಿಲ್ಲೆ ಕನ್ನಡದಲ್ಲಿರಬೇಕು.

ಸೇವಾ ಸಿಂಧು ಕೇಂದ್ರಗಳಲ್ಲಿ ದೊರೆಯುವ ಅಂಧರು ಮತ್ತು ಅಂಗವಿಕಲರ ಪಾಸ್‌ಗೆ ಸಂಬಂಧಿಸಿದಂತೆ ನೀಡುವ ಅರ್ಜಿ ನಮೂನೆಗಳು ಕನ್ನಡದಲ್ಲಿರಬೇಕು. ಬಸ್‌ಗಳು ನಿಲ್ದಾಣದಿಂದ ನಿಲ್ದಾಣಕ್ಕೆ ಸಂಚರಿಸುವಾಗ ಖಾಲಿ ಇರುವ ಕಡೆಗಳಲ್ಲಿ ಕನ್ನಡಪರ ಘೋಷಣೆಗಳನ್ನು ಹಾಕಿಸಬೇಕು. ಬಸ್ ನಿಲ್ದಾಣಗಳಲ್ಲಿ ಕನ್ನಡದ ಕವಿ-ಕಾವ್ಯಗಳನ್ನು ಪರಿಚಯಿಸಬೇಕು.

ಸಾರಿಗೆ ವಾಹನಗಳಲ್ಲಿ ಅಚ್ಚ ಕನ್ನಡದಲ್ಲಿ ಮಾತನಾಡುವ ನಿರ್ವಾಹಕರನ್ನು ಸಂಸ್ಥೆಯಿಂದ ಗುರುತಿಸಿ ಅಭಿನಂದಿಸುವ ಕಾರ್ಯವನ್ನು ಮಾಡಬೇಕು ಎಂದು ಡಾ. ಟಿ. ಎಸ್ ನಾಗಾಭರಣ ಸಲಹೆ ನೀಡಿದರು. ಬಳಿಕ ಮಾತನಾಡಿದ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಸಂಸ್ಥೆಯು ಹೊರಡಿಸುವ ಮತ್ತು ಇತರೆ ವಾಣಿಜ್ಯ ವ್ಯವಹಾರಗಳಲ್ಲಿ ತೆಗೆದುಕೊಳ್ಳುವ ಜಾಹೀರಾತುಗಳಲ್ಲಿ ಪ್ರಧಾನವಾಗಿ ಕನ್ನಡವನ್ನು ಬಳಸಲು ಕ್ರಮ ವಹಿಸಲಾಗುತ್ತಿದೆ.

ವಿದ್ಯುನ್ಮಾನ ಫಲಕಗಳಲ್ಲಿ ಪ್ರಕಟವಾಗುವ ಮಾಹಿತಿಗಳು ಪ್ರಧಾನವಾಗಿ ಕನ್ನಡದಲ್ಲಿರುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಸಂಸ್ಥೆಯಲ್ಲಿ ಬಳಕೆಯಾಗುತ್ತಿರುವ ತಂತ್ರಾಂಶಗಳಲ್ಲಿ ಸೆಪ್ಟೆಂಬರ್ ಒಳಗೆ ಕನ್ನಡದಲ್ಲಿಯೂ ಮಾಹಿತಿ ಲಭಿಸುವಂತೆ ಅಗತ್ಯಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡಪರವಾದ 2 ಸಾವಿರ ಉಕ್ತಿಗಳನ್ನು ನೀಡಿದರೆ ಬಸ್‌ಗಳು ನಿಲ್ದಾಣದಿಂದ ನಿಲ್ದಾಣಕ್ಕೆ ಸಂಚರಿಸುವಾಗ ಖಾಲಿ ಇರುವ ಕಡೆಗಳಲ್ಲಿ 2 ತಿಂಗಳೊಳಗಾಗಿ ಅಳವಡಿಸಲಾಗುವುದು ಎಂದರು. ಇದೇ ವೇಳೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್, ಆಪ್ತ ಕಾರ್ಯದರ್ಶಿ ಮಹೇಶ ಎನ್, ಬಿಎಂಟಿಸಿಯ ಮಾಹಿತಿ ಮತ್ತು ತಂತ್ರಜ್ಞಾನದ ನಿರ್ದೇಶಕ ಸೂರ್ಯಕಾಂತ್ ಸೇನ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಓದಿ:ವಿಧಾನಪರಿಷತ್ ಚುನಾವಣೆ : ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧ, ಅಧಿಕೃತ ಘೋಷಣೆ ಬಾಕಿ

For All Latest Updates

TAGGED:

ABOUT THE AUTHOR

...view details