ಕರ್ನಾಟಕ

karnataka

ETV Bharat / state

ನಾಳೆ ಬೆಂಗಳೂರು ಕರಗ ಆಚರಣೆ ಇಲ್ಲ: ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ

ನಾಳೆ ಬೆಂಗಳೂರಿನಲ್ಲಿ ಕರಗ ಆಚರಣೆ ನಿರ್ಬಂಧಿಸಿರುವುದಾಗಿ ದೇವಾಲಯದ ಆಡಳಿತ ಮಂಡಳಿ ಮತ್ತು ಕೇಂದ್ರ ವಿಭಾಗದ ಉಪ ಪೊಲೀಸ್​ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

By

Published : Apr 7, 2020, 8:55 PM IST

Press release
ನಾಳೆ ಬೆಂಗಳೂರು ಕರಗ ಆಚರಣೆ ಇಲ್ಲ

ಬೆಂಗಳೂರು: ನಾಳೆ ಕರಗ ಆಚರಣೆ ಇಲ್ಲ ಎಂದು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಪತ್ರಿಕಾ ಪ್ರಕಟಣೆ

ಕೊರೊನಾ ವೈರಸ್ ಭೀತಿ ಹಿನ್ನೆಲೆ ಕರಗ ಆಚರಣೆಯೂ ಬೇಡ ಎಂದು ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.

ಪತ್ರಿಕಾ ಪ್ರಕಟಣೆ

ಈ ಕುರಿತು ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್​ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕರಗ ಆಚರಣೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಆಚರಣೆ, ಮೆರವಣಿಗೆ ಸೇರಿ ಯಾವುದೇ ಬಹಿರಂಗ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.

ABOUT THE AUTHOR

...view details