ದೇವನಹಳ್ಳಿ: ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಕರವೇ ಕಾರ್ಯಕರ್ತರು ಯತ್ನಿಸಿದರು. ಬೆಳ್ಳಂಬೆಳಗ್ಗೆ ಏರ್ಪೋರ್ಟ್ಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇಯ 12 ಕಾರ್ಯಕರ್ತರನ್ನು ಏರ್ಪೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳ್ಳಂಬೆಳಗ್ಗೆ ಏರ್ಪೋರ್ಟ್ಗೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರು: 12 ಮಂದಿ ಪೊಲೀಸರ ವಶಕ್ಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇಯ 12 ಕಾರ್ಯಕರ್ತರನ್ನು ಏರ್ಪೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಏರ್ಪೋರ್ಟ್ನಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಬೋರ್ಡಿಂಗ್ ಪಾಸ್ ಉಳ್ಳವರಿಗೆ ಮಾತ್ರ ವಿಮಾನ ನಿಲ್ದಾಣದೊಳಕ್ಕೆ ಬಿಡಲಾಗುತ್ತಿದೆ. ಏರ್ಪೋರ್ಟ್ ಪ್ರವೇಶ ದ್ವಾರದಲ್ಲಿಯೇ ತಪಾಸಣೆ ನಡೆಸಲಾಗುತ್ತಿದೆ. ಒಂದು ಬೋರ್ಡಿಂಗ್ ಪಾಸ್ ಇದ್ದರೆ ಒಬ್ಬರಿಗೆ ಮಾತ್ರ ಪ್ರವೇಶಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮಾಧ್ಯಮಗಳ ನಿರ್ಬಂಧ: ಕರ್ನಾಟಕ ಬಂದ್ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗಡೆ ಪೊಲೀಸರು ಮಾಧ್ಯಮ ಪ್ರತಿನಿಧಿಗಳನ್ನು ಸಹ ಬಿಡುತ್ತಿಲ್ಲ. ಈಶಾನ್ಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ಅವರು ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಬಿಡದಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ವಿಮಾನ ನಿಲ್ದಾಣದ ಒಳಗಡೆ ತೆರಳುವ ಫ್ಲೈಓವರ್ನಲ್ಲೇ ಮಾಧ್ಯಮ ಪ್ರತಿನಿಧಿಗಳನ್ನು ತಡೆ ಹಿಡಿಯಲಾಗುತ್ತಿದೆ.