ಕರ್ನಾಟಕ

karnataka

ETV Bharat / state

ಶೀಘ್ರದಲ್ಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅನುಷ್ಠಾನಕ್ಕೆ ಸೂಚನೆ - ಮಂಡಳಿಯ ಸಾಮಾನ್ಯ ಸಮಿತಿ ಸಂಯೋಜನೆ

ಶೀಘ್ರದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಅನುಷ್ಠಾನಗೊಳಿಸಲು ಪಶುಸಂಗೋಪನಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶೀಘ್ರದಲ್ಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅನುಷ್ಠಾನಕ್ಕೆ ಸೂಚನೆ

By

Published : Oct 4, 2019, 11:44 PM IST

ಬೆಂಗಳೂರು : ಶೀಘ್ರದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಅನುಷ್ಠಾನಗೊಳಿಸಲು ಇಂದು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸುಪ್ರೀಂ‌ಕೋರ್ಟ್ ಪ್ರಾಣಿ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ರಾಜ್ಯಗಳಿಗೆ ಈ ಮೊದಲೇ ನಿರ್ದೇಶಿಸಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ತೀರ್ಮಾನಿಸಿದಂತೆ ರಾಜ್ಯದಲ್ಲಿಯೂ ಪ್ರಾಣಿ ಕಲ್ಯಾಣ ಮಂಡಳಿಯನ್ನು ರೂಪಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಹಾಗೂ ಸ್ಥಳಿಯ ಹಂತದಲ್ಲಿ ಮಂಡಳಿಯ ಕಾರ್ಯನಿರ್ವಹಣೆಯ ಬಗ್ಗೆ ಮಾರ್ಗಸೂಚಿಗಳನ್ನು ತಯಾರಿಸಲು ಸೂಚನೆ ನೀಡಲಾಯಿತು. ಜಿಲ್ಲಾ,ತಾಲೂಕು ಮತ್ತು ಸ್ಥಳೀಯ ಮಟ್ಟದ ಪ್ರಾಧಿಕಾರದಲ್ಲಿ ಪ್ರಾಣಿಗಳನ್ನು ವಶಪಡಿಸಿಕೊಂಡಾಗ ಅವುಗಳ ಸಂರಕ್ಷಣೆ ಹಾಗೂ ನಿರ್ವಹಣೆಯ ಬಗ್ಗೆಯೂ ಸಮಾಲೋಚನೆ ನಡೆಯಿತು. ಅಹಿತಕರ ಘಟನೆಗಳು ನಡೆದಾಗ ಎಫ್​ಐಆರ್ ದಾಖಲಿಸುವ ಸಮಯದಲ್ಲಿ ಪಶುಪಾಲನಾ ಇಲಾಖೆಯ ಜಿಲ್ಲಾ, ತಾಲ್ಲೂಕು ಸ್ಥಳೀಯ ಅಧಿಕಾರಿಗಳಿಗೆ ನಿರ್ದಿಷ್ಟ ಹೊಣೆ ಮತ್ತು ಅಧಿಕಾರ ನೀಡುವ ಬಗ್ಗೆ ಮಾರ್ಗಸೂಚಿಗಳನ್ನು ತಯಾರಿಸಲು ಸೂಚಿಸಲಾಗಿದೆ.

ಶೀಘ್ರದಲ್ಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅನುಷ್ಠಾನಕ್ಕೆ ಸೂಚನೆ

ಮಂಡಳಿಯ ಸಾಮಾನ್ಯ ಸಮಿತಿ ಸಂಯೋಜನೆ:

ಪಶುಸಂಗೋಪನಾ ಸಚಿವರು ಇದರ ಅಧ್ಯಕ್ಷರಾಗಿದ್ದು, ಗೃಹ, ಹಣಕಾಸು, ಪಶುಸಂಗೋಪನೆ ಮತ್ತು ವೀನುಗಾರಿಕೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ, ಸಾರಿಗೆ, ಪೌರಾಡಳಿತ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳ ಪ್ರಧಾನ ಕಾರ್ಯದರ್ಶಿಗಳು ಪದನಿಮಿತ್ತ ಸದಸ್ಯರಾಗಿರುತ್ತಾರೆ.

ಇದರೊಂದಿಗೆ ಆಯುಕ್ತರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ, ಮುಖ್ಯ ವನ್ಯಜೀವಿ ವಾರ್ಡನ್, ಅರಣ್ಯ ಇಲಾಖೆ, ಪಶುವೈದ್ಯಕೀಯ ವಿಜ್ಞಾನ ಕಾಲೇಜು ಡೀನ್, ರಿಜಿಸ್ಟ್ರಾರ್, ಕರ್ನಾಟಕ ಪಶುವೈದ್ಯಕೀಯ ಮಂಡಳಿ, ಆಯುಕ್ತರು ಶಿಕ್ಷಣ ಇಲಾಖೆಯವರು ಇರುತ್ತಾರೆ. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ABOUT THE AUTHOR

...view details