ಕರ್ನಾಟಕ

karnataka

By

Published : Nov 30, 2020, 1:31 PM IST

ETV Bharat / state

ಡಿ.5ರಂದು ರಾಜ್ಯ ಬಂದ್​​: ಬಿಬಿಎಂಪಿ ಮಾರುಕಟ್ಟೆಗಳಿಂದ ಬೆಂಬಲ ಇಲ್ಲ

ಡಿ.5ರಂದು ರಾಜ್ಯ ಬಂದ್​ ಇದ್ದು, ಈ ದಿನ ಯಾರಾದ್ರೂ ಬಿಬಿಎಂಪಿ ಮಾರುಕಟ್ಟೆಗಳನ್ನು ಬಲವಂತವಾಗಿ ಮುಚ್ಚಿಸಿದ್ರೆ, ಕಾನೂನು ಪ್ರಕಾರ ಕ್ರಮ ಕೈಗೊಂಡು ದೂರು ದಾಖಲು ಮಾಡಲಾಗುವುದು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಆಯುಕ್ತ ಮಂಜುನಾಥ್ ಪ್ರಸಾದ್
ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು:ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಡಿಸೆಂಬರ್ 5ಕ್ಕೆ ರಾಜ್ಯ ಬಂದ್​ಗೆ ಕರೆ ನೀಡಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಪ್ರತಿಕ್ರಿಯೆ ನೀಡಿರುವ ಆಯುಕ್ತ ಮಂಜುನಾಥ್ ಪ್ರಸಾದ್, ಬಂದ್ ವೇಳೆ ಬಿಬಿಎಂಪಿ ಮಾರುಕಟ್ಟೆಗಳನ್ನು ಬಲವಂತವಾಗಿ ಮುಚ್ಚಿಸಿದ್ರೆ, ಕಾನೂನು ಪ್ರಕಾರ ಕ್ರಮ ಕೈಗೊಂಡು ದೂರು ದಾಖಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ನಾನು ಆತ್ಮಹತ್ಯೆ ಮಾಡಿಕೊಳ್ಳುವವನಲ್ಲ, ಅಜೀರ್ಣ ಮಾತ್ರೆ ಬದಲು ನಿದ್ದೆ ಮಾತ್ರೆ ಸೇವಿಸಿದ್ದೆ.. ಎನ್ ಆರ್‌ ಸಂತೋಷ್

ನಮ್ಮಲ್ಲಿ ಮಾರುಕಟ್ಟೆಗಳನ್ನು ಮುಚ್ಚಿಸಲು ಹೋಗಬಾರದು‌. ಬಲವಂತವಾಗಿ ವ್ಯಾಪಾರಿಗಳನ್ನು ಬಂದ್​​ಗೆ ಬೆಂಬಲಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹೈಕೋರ್ಟ್, ಸುಪ್ರೀಂಕೋರ್ಟ್ ನಿರ್ದೇಶನವೂ ಇದೆ. ಹೀಗಾಗಿ ಒತ್ತಾಯ ಪೂರ್ವಕವಾಗಿ ಮಾರುಕಟ್ಟೆಗಳ‌ನ್ನು ಬಂದ್ ಮಾಡಿಸಿ, ಜನರಿಗೆ ವ್ಯಾಪಾರಿಗಳಿಗೆ ತೊಂದರೆ ನೀಡಬಾರದು. ಒಂದು ವೇಳೆ ತೊಂದರೆ ನೀಡಿದ್ರೆ, ತಪ್ಪಿತಸ್ಥರ ವಿರುದ್ಧ ಸ್ಥಳೀಯ ಅಧಿಕಾರಿಗಳೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಾರೆ ಎಂದರು.

ಹೀಗಾಗಿ ಕೆ.ಆರ್. ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆ, ಮಡಿವಾಳ ಸೇರಿದಂತೆ ಪ್ರಮುಖ ಬಿಬಿಎಂಪಿ ಮಾರುಕಟ್ಟೆಗಳು ಎಂದಿನಂತೆ ವ್ಯಾಪಾರ ವಹಿವಾಟನ್ನು ಡಿಸೆಂಬರ್ ಐದರಂದು ನಡೆಸಲಿವೆ‌.

ABOUT THE AUTHOR

...view details