ಕರ್ನಾಟಕ

karnataka

ಸಿದ್ದರಾಮಯ್ಯ, ಡಿಕೆಶಿ ಪದಗ್ರಹಣಕ್ಕೆ ಕ್ಷಣಗಣನೆ - ಗಣ್ಯಾತಿ ಗಣ್ಯರ ಆಗಮನ: ಸಿಇಟಿ ಪರೀಕ್ಷೆಯೂ ಸುಗಮ

By

Published : May 20, 2023, 9:16 AM IST

ಇಂದು ನಡೆಯಲಿರುವ ಸಿಎಂ, ಡಿಸಿಎಂ ಪದಗ್ರಹಣ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಈ ಬೆನ್ನಲ್ಲೇ ಸಿಇಟಿ ಪರೀಕ್ಷೆಯಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

karnataka cm and dcm sworn in today
ಪ್ರಮಾಣ ವಚನ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಜೊತೆ ಎಂಟು ಸಚಿವರ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯುತ್ತಿದೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಿನ್ನೆ ರಾತ್ರಿಯೇ ರಾಜ್ಯಕ್ಕೆ ಆಗಮಿಸಿ ಬೆಂಗಳೂರಿನ ಖಾಸಗಿ ತಾರಾ ಹೋಟೆಲ್​ನಲ್ಲಿ ತಂಗಿದ್ದಾರೆ.

ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಎಐಸಿಸಿ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್‌ಗಢ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಭಾಗಿಯಾಗಲಿದ್ದಾರೆ. ಸಮಾರಂಭದಲ್ಲಿ 30 ಮಂದಿ ಗಣ್ಯರು ವೇದಿಕೆ ಮೇಲೆ ಕುಳಿತುಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಕೆಡಿಎಂನಲ್ಲಿ ಕಾರ್ಯಕ್ರಮ ವೀಕ್ಷಣೆಗೆ 40,000 ಮಂದಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಇದನ್ನೂ ಓದಿ :ಇಂದು ಸಿಎಂ, ಡಿಸಿಎಂ ಜೊತೆಗೆ ಬೆರಳೆಣಿಕೆಯ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಈ ಮಧ್ಯೆ ಇಂದು ಸಿಇಟಿ ಪರೀಕ್ಷೆ ಸಹ ನಡೆಯುತ್ತಿದೆ. ಪದಗ್ರಹಣ ಸಮಾರಂಭ ನಿಯೋಜನೆಗೂ ಮುನ್ನವೇ ಪೂರ್ವ ನಿರ್ಧರಿತವಾಗಿ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟವಾಗಿದ್ದು, ನಿಗದಿಯಂತೆ ಎಕ್ಸಾಂ ನಡೆಯಲಿದೆ. ಪದಗ್ರಹಣ ಸಮಾರಂಭದ ಸಂದರ್ಭದಲ್ಲಿಯೇ ಸಿಇಟಿ ಪರೀಕ್ಷೆ ಸಹ ನಡೆಯಲಿದ್ದು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ :ಸಿದ್ದರಾಮಯ್ಯ - ಡಿಕೆಶಿ ಪದಗ್ರಹಣ : ಕಂಠೀರವ ಸ್ಟೇಡಿಯಂನಲ್ಲಿ ಕೈ ಶಕ್ತಿ ಪ್ರದರ್ಶನ

ಸಿದ್ದರಾಮಯ್ಯ ಟ್ವೀಟ್: " ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸಮಾರಂಭದಿಂದಾಗಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಆಗದಂತೆ ಪೊಲೀಸರು ಎಚ್ಚರಿಕೆಯಿಂದ ಕ್ರಮಕೈಗೊಳ್ಳಬೇಕು. ಪ್ರಮಾಣ ವಚನ ಸಮಾರಂಭದ ಕಾರಣದಿಂದಾಗಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ. ಸಮಾರಂಭಕ್ಕೆ ಆಗಮಿಸುವವರು ಪೊಲೀಸರಿಗೆ ಸಹಕಾರ ನೀಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡುತ್ತೇನೆ" ಎಂದಿದ್ದಾರೆ.

ಇದನ್ನೂ ಓದಿ :ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ : ಗ್ಯಾರಂಟಿ ಮೇಲೆನೇ ಎಲ್ಲರ ಚಿತ್ತ..

ಸಂತಾಪ : ಈ ನಡುವೆ ನಿನ್ನೆ ಹೃದಯಾಘಾತದಿಂದ ನಿಧನರಾದ ಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಅಗಲಿಕೆಗೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಡೌಟ್

ABOUT THE AUTHOR

...view details