ಬೆಂಗಳೂರು: ಲಾಕ್ ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಕಿರುತೆರೆ ಕಾರ್ಮಿಕರು ಹಾಗೂ ಕಲಾವಿದರಿಗೆ ನೆರವಾಗಲು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಂದಾಗಿದೆ.
ಸಂಕಷ್ಟದಲ್ಲಿರುವ ಕಿರುತೆರೆ ಕಾರ್ಮಿಕರು, ಕಲಾವಿದರ ನೆರವಿಗೆ ಬಂದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ - Karnataka Television Association distributes essentials
ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಿರುತೆರೆ ಕಾರ್ಮಿಕರು ಮತ್ತು ಕಲಾವಿದರಿಗೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಶನ್ ಅಗತ್ಯ ಸಾಮಗ್ರಿಗಳನ್ನು ವಿತರಿಸಿದೆ.
![ಸಂಕಷ್ಟದಲ್ಲಿರುವ ಕಿರುತೆರೆ ಕಾರ್ಮಿಕರು, ಕಲಾವಿದರ ನೆರವಿಗೆ ಬಂದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ television workers and artists](https://etvbharatimages.akamaized.net/etvbharat/prod-images/768-512-6795931-170-6795931-1586916982712.jpg)
television workers and artists
ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದರಿಂದ ಕಿರುತೆರೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಸಣ್ಣ ಕಲಾವಿದರು ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಾರ್ಮಿಕರು ಹಾಗೂ ಕಲಾವಿದರ ಕುಟುಂಬಗಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲುಅಸೋಸಿಯೇಷನ್ ತೀರ್ಮಾನಿಸಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್
ಈ ಬಗ್ಗೆ ಮಾತನಾಡಿರುವ ಅಸೋಸಿಯೇಶನ್ ಅಧ್ಯಕ್ಷ ಶಿವಕುಮಾರ್, ಈಗಾಗಲೇ ಸುಮಾರು 2500 ಮಂದಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಅಗತ್ಯ ವಸ್ತುಗಳನ್ನು ನೀಡಿದ್ದೇವೆ ಎಂದಿದ್ದಾರೆ.