ಬೆಂಗಳೂರು:ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಮುಂದಿನ ಐದು ದಿನಗಳ ತನಕ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ಇಂದು ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದ್ದು, ಜಲಾಶಯಗಳಿಗೆ ಒಳಹರಿವಿಗೆ ಅನುಗುಣವಾಗಿ ನೀರು ಬಿಡುವಂತೆ ಸೂಚನೆ ನೀಡಿದೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ.