ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ ವಿರುದ್ಧ ಮಾಜಿ ಸ್ಪೀಕರ್​ ತೀವ್ರ ಅಸಮಾಧಾನ - KB Koliwada reacted to media

ಕಾಂಗ್ರೆಸ್​ನ ಇವತ್ತಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಕಾಂಗ್ರೆಸ್ ನಿಂತ ನೀರಾಗಿದೆ ಎಂದು ಹೇಳಿದ್ದಾರೆ.

KB Koliwada
ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ

By

Published : Jan 27, 2020, 5:57 PM IST

ಬೆಂಗಳೂರು:ಕಾಂಗ್ರೆಸ್ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಕಾಂಗ್ರೆಸ್ ನಿಂತ ನೀರಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್​ ಪಕ್ಷದ ಚಟುವಟಿಕೆಗಳು ಕುಂಠಿತವಾಗಿದೆ. ಅತ್ತ ಕಡೆ ಕೆಪಿಸಿಸಿ ಅಧ್ಯಕ್ಷರ ರಾಜೀನಾಮೆ ಅಂಗೀಕಾರವೂ ಆಗಿಲ್ಲ, ತಿರಸ್ಕಾರವೂ ಆಗಿಲ್ಲ. ಹಾಗಾಗಿ ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದು ನಾಯಕರು ಹೇಳುತ್ತಾರೆ. ಆದರೆ ತಾವೇ ಹೈಕಮಾಂಡ್​ಗೆ ಹೋಗಿ ಕಂಡಿಷನ್ ಹಾಕಿ ಬರ್ತಾರೆ. ಏನೇ ಕಂಡೀಷನ್ ಹಾಕಿ ಬಂದಿರಲಿ. ಆದರೆ, ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಹಿತದೃಷ್ಠಿಯಿಂದ ಎಲ್ಲ ನಾಯಕರು ಹೈಕಮಾಂಡ್​ಗೆ ಸಂಪೂರ್ಣ ಅಧಿಕಾರವನ್ನು ಬಿಟ್ಟುಕೊಡಬೇಕೆಂದು ಕಾಂಗ್ರೆಸ್​ನ ಕಾರ್ಯಕರ್ತನಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ

ಇನ್ನು ಕಾಂಗ್ರೆಸ್​ ಹೈಕಮಾಂಡ್​ ಯಾವಾಗಲೂ ಅತ್ಯಂತ ಶಕ್ತಿಯುತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗುಂಪುಗಾರಿಕೆ ಮಾಡುವವರೆಲ್ಲರೂ ಸಂಪೂರ್ಣ ಸ್ವಾತಂತ್ರ್ಯವನ್ನು ಹೈಕಮಾಂಡ್​ಗೆ ಬಿಟ್ಟುಕೊಟ್ಟರೆ ಪಕ್ಷಕ್ಕೆ ಒಳ್ಳೆಯದು, ಇದನ್ನೇ ಮುಂದುವರಿಸಿಕೊಂಡು ಹೋದರೆ ಪಕ್ಷದಲ್ಲಿ ಕ್ರಾಂತಿಯನ್ನೇ ಮಾಡಬೇಕಾಗುತ್ತದೆ ಎಂದರು.

ABOUT THE AUTHOR

...view details