ಕರ್ನಾಟಕ

karnataka

ETV Bharat / state

ಆನಂದ್​ ಸಿಂಗ್​ ರಾಜೀನಾಮೆ ಸಂಬಂಧ ಸ್ಪೀಕರ್​​​ ಜೊತೆ ಚರ್ಚಿಸಿದ ಖಂಡ್ರೆ, ಪರಮೇಶ್ವರ್​​​​​​

ವಿಧಾನಸೌಧದಲ್ಲಿ ಸ್ಪೀಕರ್ ಆರ್​.ರಮೇಶ್​ ಕುಮಾರ್ ಅವರನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಆನಂದ್ ​ಸಿಂಗ್ ರಾಜೀನಾಮೆ ನೀಡಿರುವ ಕುರಿತು ಚರ್ಚೆ ನಡೆಸಿದ್ದಾರೆ.

By

Published : Jul 4, 2019, 5:23 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು: ವಿಧಾನಸೌಧದಲ್ಲಿ ಸ್ಪೀಕರ್ ಆರ್​.ರಮೇಶ್​ ಕುಮಾರ್ ಅವರನ್ನು ಭೇಟಿ ಮಾಡಿದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಆನಂದ್ ​ಸಿಂಗ್ ರಾಜೀನಾಮೆ ನೀಡಿರುವ ಕುರಿತು ಚರ್ಚೆ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಆನಂದ್ ಸಿಂಗ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆನಂದ್​ ಸಿಂಗ್​ ವಿರುದ್ಧ ದೂರು ಕೂಡ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಇದ್ದರು.

ಪಕ್ಷಕ್ಕೆ ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ:ಸ್ಪೀಕರ್ ಭೇಟಿ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ಆನಂದ್ ಸಿಂಗ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಪಕ್ಷಕ್ಕೆ ಅವರು ಯಾವುದೇ ರಾಜೀನಾಮೆ ಪತ್ರ ಕೊಟ್ಟಿಲ್ಲ. ಆನಂದ್ ​ಸಿಂ​ಗ್ ‌ರಾಜೀನಾಮೆ ಕೊಟ್ಟಿರುವುದು ಏಕೆ ಎಂಬ ಮಾಹಿತಿ ಪಡೆದಿದ್ದೇವೆ ಅಷ್ಟೇ. ಆದರೆ ರಾಜೀನಾಮೆ ಅಂಗೀಕಾರ ಮಾಡದಂತೆ ಸ್ಪೀಕರ್​​ಗೆ ದೂರು ಕೊಟ್ಟಿಲ್ಲ. ಈ ಬಗ್ಗೆ ಪಕ್ಷದ ‌ನಾಯಕರ ಜೊತೆ ಚರ್ಚಿಸಿ‌ ದೂರು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿವರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details