ಬೆಂಗಳೂರು: ಇತ್ತೀಚಿಗೆ ಸಿಎಂ ಯಡಿಯೂರಪ್ಪ ಶಾಸಕರೊಂದಿಗೆ ನಡೆಸಿದ ಸಮಾಲೋಚನಾ ಸಭೆಗೆ ಗೈರಾಗಿದ್ದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಸಿಎಂ ಹಾಗೂ ರಾಜ್ಯಾಧ್ಯಕ್ಷರ ಅನುಮತಿ ಪಡೆದುಕೊಂಡೇ ಗೈರಾಗಿದ್ದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ಒಪ್ಪಿಗೆ ಪಡೆದು ನಾನು ಬೇರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೋಗಿದ್ದೆ. ರಾಜ್ಯ ಪ್ರವಾಸ ಮಾಡುವಂತ ಸಂದರ್ಭದಲ್ಲಿ ಇಂತಹ ಸನ್ನಿವೇಶಗಳು ಎದುರಾಗುತ್ತವೆ. ಅದೇ ರೀತಿ ಸಿಎಂ ನಡೆಸಿದ್ದ ಒಂದೆರಡು ಸಭೆಯಲ್ಲಿ ಭಾಗವಹಿಸಲು ಆಗಲಿಲ್ಲ. ಹಾಗಂತಾ ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.