ಬೆಂಗಳೂರು:ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್ಲಾಕ್ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್ ಸೇವೆ ಮರು ಆರಂಭ ಮಾಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಈ ಮಹತ್ವದ ನಿರ್ಧಾರ ಹೊರಡಿಸಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಕೋವಿಡ್ ಮಾರ್ಗಸೂಚಿ ನಿಯಮದೊಂದಿಗೆ ಬಸ್ ಸೇವೆ ನಾಳೆಯಿಂದ ಆರಂಭಗೊಳ್ಳಿಸುತ್ತಿದೆ. ಬಸ್ನಲ್ಲಿ ಶೇ 50ರಷ್ಟು ಆಸನ ಭರ್ತಿಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ. ಬಸ್ನಲ್ಲಿ ಪ್ರಯಾಣ ಮಾಡುವವರು ಕೋವಿಡ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ.