ಕರ್ನಾಟಕ

karnataka

ETV Bharat / state

ಜೂನ್‌ 26ರಂದು ಕಿಸಾನ್ ಮೋರ್ಚಾ ದೇಶವ್ಯಾಪಿ ಪ್ರತಿಭಟನೆ ; ಕುರುಬೂರು ಶಾಂತಕುಮಾರ್ ಬೆಂಬಲ - Rajabhan Chalo on June 26th

ಬೆಂಗಳೂರಿನ ರಾಜಭವನದ ಮುಂದೆ ರಾಜ್ಯದ ರೈತ ಸಂಘಟನೆಗಳು ಸಂಯುಕ್ತ ಕಿಸಾನ್‌ ಮೋರ್ಚಾ ಕರ್ನಾಟಕ ಅಡಿಯಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ..

kurubur-shanthakumar
ಕುರುಬೂರು ಶಾಂತಕುಮಾರ್

By

Published : Jun 23, 2021, 10:39 PM IST

ಬೆಂಗಳೂರು :ಕರ್ನಾಟಕ ರಾಜ್ಯದ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಧಾನಿಯ ರಾಜಭವನದ ಮುಂದೆ ಜೂನ್ 26ರಂದು ಪ್ರತಿಭಟನೆ ನಡೆಸಲಿದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.

ಕುರುಬೂರು ಶಾಂತಕುಮಾರ್ ಮಾತನಾಡಿದ್ದಾರೆ

ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸಿರುವ ಹೋರಾಟ 214ನೇ ದಿನಕ್ಕೆ ಮುಂದುವರೆದಿದೆ. 550ಕ್ಕೂ ಹೆಚ್ಚು ರೈತರು ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ್ದಾರೆ ಎಂದು ಕರ್ನಾಟಕದ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಜೂನ್ 26 ರಂದು ರಾಜಭವನ್ ಚಲೋ

ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 26ರಂದು ಎಲ್ಲ ರಾಜ್ಯಗಳ ರಾಜಭವನದ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯ ಪತ್ರ ಸಲ್ಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಬೆಂಗಳೂರಿನ ರಾಜಭವನದ ಮುಂದೆ ರಾಜ್ಯದ ರೈತ ಸಂಘಟನೆಗಳು ಸಂಯುಕ್ತ ಕಿಸಾನ್‌ ಮೋರ್ಚಾ ಕರ್ನಾಟಕ ಅಡಿಯಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಓದಿ:ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವ ಸಮೀಕ್ಷೆ: ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

For All Latest Updates

ABOUT THE AUTHOR

...view details