ಕರ್ನಾಟಕ

karnataka

ETV Bharat / state

ಇಸ್ರೋ ಅಧ್ಯಕ್ಷರ ಭೇಟಿ ಮಾಡಿದ ಸಚಿವ ಸವದಿ.. ಇನ್ನಷ್ಟು ಸ್ಮಾರ್ಟ್​ ಆಗಲಿದ್ಯಾ ರಾಜ್ಯ ಸಾರಿಗೆ ಸಂಸ್ಥೆ? - ಲಕ್ಷ್ಮಣ ಸವದಿ

ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಬಸ್​ಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯಧಕ್ಷತೆ ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಡಿಸಿಎಂ ಸವದಿ ಮನವಿ ಮಾಡಿಕೊಂಡರು.

Lakshmana Sawadi meets ISRO president: what if state transport will became smart
ಇಸ್ರೋ ಅಧ್ಯಕ್ಷರ ಭೇಟಿ ಮಾಡಿಸ ಲಕ್ಷ್ಮಣ ಸವದಿ: ಇನ್ನಷ್ಟು ಸ್ಮಾರ್ಟ್​ ಆಗಲಿದ್ಯಾ ರಾಜ್ಯ ಸಾರಿಗೆ ಸಂಸ್ಥೆ..!

By

Published : Apr 29, 2020, 5:49 PM IST

ಬೆಂಗಳೂರು :ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿ ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಕುರಿತು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಇಸ್ರೋದ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಇಸ್ರೋ ಮುಖ್ಯ ಕಚೇರಿಯಲ್ಲಿ ಮಾತುಕತೆ ನಡೆಸಿದ ಅವರು, ಇಸ್ರೋ ತಂತ್ರಜ್ಞಾನವನ್ನು ಪಡೆದು ಪ್ರಮುಖವಾಗಿ ಸಾರಿಗೆ ಇಲಾಖೆಯ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆಎಸ್​​​ಆರ್​ಟಿಸಿ ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿಎಂಟಿಸಿ ಮುಂತಾದ ಸಂಸ್ಥೆಗಳ ವೆಚ್ಚಗಳನ್ನು ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಿದರು.

ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಬಸ್​ಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯಧಕ್ಷತೆ ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಡಿಸಿಎಂ ಸವದಿ ಮನವಿ ಮಾಡಿಕೊಂಡರು.

ಉಪಮುಖ್ಯಮಂತ್ರಿಗಳು ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೋ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು. ಇಸ್ರೋದ ಸೈಂಟಿಫಿಕ್ ಸೆಕ್ರೆಟರಿ ಡಾ. ಉಮಾ ಮಹೇಶ್ವರನ್ ಹಾಗೂ ಇಸ್ರೋದ ಅಂತರಿಕ್ಷ ಎಂ ಡಿ ರಾಕೇಶ್ ಶಶಿಭೂಷಣ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details