ಕರ್ನಾಟಕ

karnataka

ETV Bharat / state

ಕೊರೊನಾ ವಾರಿಯರ್ಸ್‌ ಕರ್ತವ್ಯ ನಿರ್ವಹಿಸದಿದ್ದರೆ ಕಾನೂನು ಕ್ರಮ : ಅಶ್ವತ್ಥ್ ನಾರಾಯಣ ಎಚ್ಚರಿಕೆ - ಬೆಂಗಳೂರು

ಕರ್ತವ್ಯದಿಂದ ದೂರ ಹೋದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಯುದ್ಧದ ಸಂದರ್ಭದಲ್ಲಿ ಓಡಿ ಹೋದರೆ ಹೇಗೆ?. ಯಾವುದೇ ಸಂದರ್ಭದಲ್ಲೂ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದಲ್ಲಿದ್ದು ಜವಾಬ್ದಾರಿ ನಿರ್ವಹಣೆ ಮಾಡದಿದ್ದರೆ ಹೇಗೆ ? ಎಂದು ಪ್ರಶ್ನಿಸಿದ ಅವರು, ಜನರ ಸೇವೆಯನ್ನು ಎಲ್ಲರೂ ಮಾಡಬೇಕು..

Aswaththa Narayana
ಎಸ್. ನಿಜಲಿಂಗಪ್ಪ ಪುಣ್ಯತಿಥಿ: ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಅಶ್ವತ್ಥ ನಾರಾಯಣ

By

Published : Aug 8, 2020, 1:28 PM IST

ಬೆಂಗಳೂರು :ಕೊರೊನಾ ವಾರಿಯರ್ಸ್​ ಕರ್ತವ್ಯ ನಿರ್ವಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಾ. ಸಿ ಎನ್‌ ಅಶ್ವತ್ಥ್‌ ನಾರಾಯಣ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ವಾರಿಯರ್ಸ್​ ಕರ್ತವ್ಯ ನಿರ್ವಹಿಸದಿದ್ರೆ ಕಾನೂನು ಕ್ರಮ.. ಅಶ್ವತ್ಥ್‌ ನಾರಾಯಣ ಎಚ್ಚರಿಕೆ

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ಅವರ ಭಾವಚಿತ್ರಕ್ಕೆ ಇಂದು ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿರು. ಕೋವಿಡ್ ನಿರ್ವಹಣಾ ಕಾರ್ಯಕ್ಕೆ ಬರದೇ ಇರುವವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೊರೊನಾಗೆ ಭಯಪಟ್ಟು ಕೆಲವರು ಬರುತ್ತಿಲ್ಲ. ಅಂತವರಿಗೆಲ್ಲ ನೋಟಿಸ್ ಕೊಡಲಾಗಿದೆ. ನೋಟಿಸ್​​ಗೆ ಏನು ಉತ್ತರ ಕೊಡುತ್ತಾರೆ ಎಂಬುದನ್ನು ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.

ಕೊರೊನಾಗೆ ಭಯಪಡುವ ಅಗತ್ಯವಿಲ್ಲ: ಕರ್ತವ್ಯದಿಂದ ದೂರ ಹೋದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಯುದ್ಧದ ಸಂದರ್ಭದಲ್ಲಿ ಓಡಿ ಹೋದರೆ ಹೇಗೆ?. ಯಾವುದೇ ಸಂದರ್ಭದಲ್ಲೂ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದಲ್ಲಿದ್ದು ಜವಾಬ್ದಾರಿ ನಿರ್ವಹಣೆ ಮಾಡದಿದ್ದರೆ ಹೇಗೆ ? ಎಂದು ಪ್ರಶ್ನಿಸಿದ ಅವರು, ಜನರ ಸೇವೆಯನ್ನು ಎಲ್ಲರೂ ಮಾಡಬೇಕು. ಮಾಡದಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಳೆ ಅನಾಹುತ ಎದುರಿಸಲು ಸಜ್ಜು :ಈ ಬಾರಿ ಮಳೆ ಅನಾಹುತ ಎದುರಿಸಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಭೀತಿ ಇರುವ ಕಡೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ನೆರೆ ನಿರ್ವಹಣೆ, ಜನರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ. ಅಗತ್ಯವಿರುವಷ್ಟು ಹಣವನ್ನು ಸಹ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದಲೂ ಸಹಕಾರ ಸಿಗುತ್ತಿದೆ‌. ಪ್ರಕೃತಿ ವಿಕೋಪ ವೇಳೆ ಸಿಗಬೇಕಾದ ಅನುದಾನ ಸಿಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಡಿಸಿಎಂ, ಕನ್ನಡವನ್ನು ಸದೃಢಗೊಳಿಸಿದವರು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು. ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ ಅವರು, ನೀರಾವರಿ, ರಾಜ್ಯದ ಸಮಗ್ರ ಸುಧಾರಣೆಯನ್ನು ಮಾಡಿದರು. ಸಂವಿಧಾನ ರಚನಾ ಸಮಿತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಗಾಂಧೀಜಿಯವರ ಅವರ ಜೊತೆ ಓಡಾಡಿದ್ದರು ಎಂದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ನಿಜಲಿಂಗಪ್ಪ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ABOUT THE AUTHOR

...view details