ಬೆಂಗಳೂರು: ತನಗೆ ಮದುವೆಯಾದರೂ ತಾನು ಪ್ರೀತಿಸುತ್ತಿದ್ದ ಮತ್ತೊಬ್ಬ ಯುವತಿ ಪರಪುರುಷನೊಂದಿಗೆ ಓಡಾಡುತ್ತಿರುವುದಾಗಿ ಅನುಮಾನ ವ್ಯಕ್ತಪಡಿಸಿ ಲಾಡ್ಜ್ಗೆ ಕರೆದೊಯ್ದು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಯನ್ನು ಬೆಂಗಳೂರಿನ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಯಶವಂತಪುರ ರೈಲ್ವೆ ಠಾಣೆ ಬಳಿಯಿರುವ ಲಾಡ್ಜ್ನಲ್ಲಿ ಒಡಿಶಾ ಮೂಲದ ದೀಪಾ ಬದನ್ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇನ್ಸ್ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಅನ್ಮಲ್ ರತನ್ಕಂ ದರ್ ಪತ್ತೆ ಹೆಚ್ಚಿ ಬಂಧಿಸಿದ್ದಾರೆ.
ಆರೋಪಿ ಅನ್ಮಲ್ ಎರಡು ವರ್ಷಗಳ ಹಿಂದೆ ಕೊಲೆಯಾದ ಯುವತಿಯ ಸ್ನೇಹಿತೆಯನ್ನು ಪ್ರೀತಿಸಿ ವಿವಾಹ ಮಾಡಿಕೊಂಡಿದ್ದ. ಹೆಚ್ಎಎಲ್ನಲ್ಲಿ ದಂಪತಿ ವಾಸವಾಗಿದ್ದರು. ಅನ್ಮಲ್ ಪತ್ನಿ ಮತ್ತು ಕೊಲೆಯಾದ ದೀಪಾ ಒಡಿಶಾದಲ್ಲಿ ಕಾಲೇಜು ಸಹಪಾಠಿಗಳಾಗಿದ್ದರು. ಇದೇ ಪರಿಚಯ ಮೇರೆಗೆ ದೀಪಾ ಸಹ ಬೆಂಗಳೂರಿಗೆ ಬಂದು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗಾಗ್ಗೆ ಗೆಳತಿಗೆ ಮನೆಗೆ ದೀಪಾ ಮನೆಗೆ ಹೋಗಿ ಬರುತ್ತಿದ್ದಳು.