ಕರ್ನಾಟಕ

karnataka

ETV Bharat / state

ಸ್ಪೀಕರ್​​ ರಮೇಶ್​​​ ಕುಮಾರ್​​ ವಿರುದ್ಧ ಮಾಧುಸ್ವಾಮಿ ಅಸಮಾಧಾನ - ಸ್ಪೀಕರ್​ ರಮೇಶ್​ ಕುಮಾರ್

ಇಂದು ಸ್ಪೀಕರ್​ ರಮೇಶ್​ ಕುಮಾರ್ ಅವರು 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ್ದು, ಇದರಿಂದ ನಾಳೆ ಯಡಿಯೂರಪ್ಪನವರ ವಿಶ್ವಾಸಮತ ಯಾಚನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಶಾಸಕರಿಗೆ ಸುಪ್ರೀಂ ಕೋರ್ಟ್ ರಕ್ಷಣೆ ಇದ್ದರೂ ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್​ ಸರ್ವೋಚ್ಚ ನ್ಯಾಯಾಲಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Madhuswamy,ಬಿಜೆಪಿ ಶಾಸಕ ಮಾಧುಸ್ವಾಮಿ

By

Published : Jul 28, 2019, 11:28 PM IST

ಬೆಂಗಳೂರು:ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್ ರಕ್ಷಣೆ ಇದ್ದರೂ ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್​ ಸರ್ವೋಚ್ಚ ನ್ಯಾಯಾಲಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಮಾಧುಸ್ವಾಮಿ

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಮಾಧುಸ್ವಾಮಿ ಮಾತನಾಡಿ, ಸ್ಪೀಕರ್ ರಮೇಶ್ ಕುಮಾರ್​ ಅವರು ಶಾಸಕರನ್ನು ಅನರ್ಹ ಮಾಡಿರುವುದರಿಂದ ನಾಳೆಯ ವಿಶ್ವಾಸಮತ ಯಾಚನೆಯ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಶಾಕರ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ರೆ, ಅನರ್ಹಗೊಳಸಿದ್ರೆ ಅಥವಾ ಅನರ್ಹಗೊಳಿಸದೆ ಇದ್ದರೂ ಅವರು ನಾಳೆ ವಾಪಸ್ ಬರುವುದಕ್ಕೆ ತಯಾರಿರಲಿಲ್ಲ. ದುರದೃಷ್ಟವಶಾತ್ ಸ್ಪೀಕರ್ ಈ ರೀತಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ಅತೃಪ್ತ ಶಾಸಕರ ಮೇಲೆ ಯಾವುದೇ ಒತ್ತಡ ಹೇರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಕೂಡ ಸ್ಪೀಕರ್ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಸುಪ್ರೀಂ ಕೋರ್ಟಿಗೆ ಮಾಡಿದ ಅವಹೇಳನ ಎಂದು ಭಾವಿಸುತ್ತೇವೆ. ಸುಪ್ರೀಂ ಕೋರ್ಟ್ ಶಾಸಕರಿಗೆ ಈಗಾಗಲೇ ರಕ್ಷಣೆ ಕೊಟ್ಟಿರುವುದರಿಂದ ಅನರ್ಹಗೊಂಡಿರುವ ಶಾಸಕರಿಗೆ ಏನೂ ಆಗುವುದಿಲ್ಲ. ಸುಪ್ರೀಂ ಕೋರ್ಟ್​ನಲ್ಲಿ ಅನರ್ಹ ಶಾಸಕರಿಗೆ ನ್ಯಾಯ ಸಿಗಲಿದೆ ಎಂದರು.

ABOUT THE AUTHOR

...view details