ಕರ್ನಾಟಕ

karnataka

ಬಸವಂತ ರೆಡ್ಡಿ ಪಾಟೀಲ್ ಮೋತಕಪಲ್ಲಿ ನಿಧನಕ್ಕೆ ಮಲ್ಲಿಕಾರ್ಜುನ್​ ಖರ್ಗೆ ಸಂತಾಪ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತ ರೆಡ್ಡಿ ಪಾಟೀಲ ಮೋತಕಪಲ್ಲಿ ಸೋಮವಾರ ನಿಧನರಾಗಿದ್ದು, ಕಾಂಗ್ರೆಸ್​ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.

By

Published : Jan 5, 2021, 6:50 PM IST

Published : Jan 5, 2021, 6:50 PM IST

Bangalore
ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ

ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಸೋಮವಾರ ನಿಧನರಾದ ಸೇಡಂ ಕ್ಷೇತ್ರದ ಮಾಜಿ ಶಾಸಕ ಬಸವಂತ ರೆಡ್ಡಿ ಪಾಟೀಲ ಮೋತಕಪಲ್ಲಿ ಅವರಿಗೆ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಸಂತಾಪ ಸೂಚಿಸಿರುವ ಖರ್ಗೆ ಸೇಡಂ ಕ್ಷೇತ್ರದ ಮಾಜಿ ಶಾಸಕರಾದ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ ಅವರ ಅಗಲಿಕೆಯಿಂದ ಕಲಬುರಗಿ ಜಿಲ್ಲೆಯು ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಸುಮಾರು 4 ದಶಕಗಳ ರಾಜಕೀಯ ಜೀವನದಲ್ಲಿ ಅಜಾತಶತ್ರುವಾಗಿ ಬದುಕಿ ಬಾಳಿದ ಪಾಟೀಲರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದ ಹಾಗೂ ಅಭಿಮಾನಗಳ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.

ಓದಿ: ಹಿರಿಯ ರಾಜಕೀಯ ಮುತ್ಸದ್ದಿ ಬಸವಂತರೆಡ್ಡಿ ಮೋತಕಪಲ್ಲಿ ನಿಧನ

88 ವರ್ಷದ ಬಸವಂತರೆಡ್ಡಿ ಪಾಟೀಲ ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ 1989 ಮತ್ತು 1999ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಯೋ ಸಹಜ ಸಮಸ್ಯೆಯಿಂದ ಸೋಮವಾರ ನಿಧನರಾಗಿದ್ದು ಇಂದು ಅಂತ್ಯಕ್ರಿಯೆ ನೆರವೇರಿದೆ.

ABOUT THE AUTHOR

...view details