ಬೆಂಗಳೂರು:ನಾವು ಆರಿಸಿಕೊಳ್ಳುವ ಆಸಕ್ತಿಯ ಕ್ಷೇತ್ರಗಳಲ್ಲಿ ಉತ್ಕೃಷ್ಟ ಸಾಧನೆ ಮಾಡುವುದು ಮುಖ್ಯವಾಗುತ್ತದೆ. ಇದಕ್ಕೆ ನಾಯಕರಾದ ಡಿ. ಹೆಚ್ ಶಂಕರಮೂರ್ತಿ ಮಾದರಿಯಾಗಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್ ಹೇಳಿದರು.
ಆರ್ಯವೈಶ್ಯ ಸಮಾಜ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಶ್ವತ್ಥ್ ನಾರಾಯಣ್ ಮಾತನಾಡಿದ ಅವರು, ಜಗತ್ತು ಯಾವಾಗಲೂ ಸ್ಪರ್ಧಾತ್ಮಕವಾಗಿರುತ್ತದೆ. 21ನೇ ಶತಮಾನದಲ್ಲಂತೂ ಇದು ತೀವ್ರವಾಗಿದೆ. ಆದ್ದರಿಂದ ನಾವು ಸದಾ ಖಚಿತತೆ, ಪರಿಣತಿ ಮತ್ತು ಉತ್ಕೃಷ್ಟತೆ ಸಾಧಿಸುವ ಗುರಿಗಳನ್ನು ಇಟ್ಟುಕೊಂಡಿರಬೇಕು ಎಂದು ಆಶಿಸಿದರು.
ರಾಜ್ಯ ರಾಜಕಾರಣದಲ್ಲಿ ರಾಜ್ಯ ಶಂಕರಮೂರ್ತಿಯವರು ಆರು ದಶಕಗಳ ಕಾಲ ನಿಷ್ಠೆಯಿಂದ ದುಡಿದಿದ್ದಾರೆ. ಅವರು ಈ ವಿಷಯದಲ್ಲಿ ನಮ್ಮೆಲ್ಲರಿಗೂ ಆದರ್ಶ ಮತ್ತು ಮೌಲ್ಯಗಳಿಂದ ಕೂಡಿರುವ ಮೇಲ್ಪಂಕ್ತಿಯನ್ನು ಹಾಕಿ ಕೊಟ್ಟಿದ್ದಾರೆ ಎಂದು ಬಣ್ಣಿಸಿದರು.