ಕರ್ನಾಟಕ

karnataka

By

Published : Nov 14, 2021, 4:13 PM IST

ETV Bharat / state

ರಾಜಕೀಯ ದುರ್ಲಾಭಕ್ಕೆ ಕಾಂಗ್ರೆಸ್​​ನಿಂದ ಬಿಟ್ ಕಾಯಿನ್ ಪ್ರಕರಣ ಬಳಕೆ: ಸಚಿವ ಸಿ.ಸಿ. ಪಾಟೀಲ್​ ಟೀಕೆ

ಬಸವರಾಜ ಬೊಮ್ಮಾಯಿ(Basavaraja bommai) ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್(bitcoin) ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ ಎಂದು ಸಚಿವ ಸಿ ಸಿ ಪಾಟೀಲ್​ ಆರೋಪಿಸಿದ್ದಾರೆ.

Minister CC Patil outrage against congress over bitcoin issue
ಸಿ.ಸಿ. ಪಾಟೀಲ

ಬೆಂಗಳೂರು:ಬಿಟ್ ಕಾಯಿನ್ (bitcoin)ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರಿಗೆ, ಇದೇ ಬಿಟ್ ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್(Minister C C Patil) ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರೇ ತಮಗೆ ಬಿಟ್ ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿಸಿರುವುದು ಸ್ಪಷ್ಟವಾಗಿದೆ. ಆದರೆ ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಒಗ್ಗಟ್ಟು ಗಟ್ಟಿಯಾಗಿದೆ. ಕಾಂಗ್ರೆಸ್ಸಿನ ಹಾಗೆ ''ಒಂದು ಮನೆ ಹಲವು ಬಾಗಿಲು" ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ ಎಂದು ಸಿ.ಸಿ. ಪಾಟೀಲರು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ.

ಬಿಟ್ ಕಾಯಿನ್ ಹಗರಣ(bitcoin scam)ಈಗಾಗಲೇ ಕೆಲವು ಕಾಂಗ್ರೆಸ್ ಮುಖಂಡರ ಕಾಲಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ ಸಹ, ತಾವೇ ಸ್ವತಃ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಖಂಡರು ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ ಎಂದು ಸಚಿವರು ಟೀಕಿಸಿದ್ದಾರೆ.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಶಾಮೀಲಾದ್ರೂ ಬಿಡಲ್ಲ, ಬಲಿ ಹಾಕ್ತೀವಿ: ಸಿಎಂ ಬೊಮ್ಮಾಯಿ

ಬಿಟ್​ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ಮಾಡಿದ್ದು ಮತ್ತು ಇ.ಡಿ. ಹಾಗೂ ಸಿಬಿಐಗೆ ಶಿಫಾರಸು ಮಾಡಿದ್ದೇ ನಮ್ಮ ಸರ್ಕಾರ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟಪಡಿಸಿದ್ದಾರೆ. ಅದರಂತೆ ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ಪೋಲಕಲ್ಪಿತವಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಸಿ.ಸಿ. ಪಾಟೀಲರು ಅಭಿಪ್ರಾಯಪಟ್ಟಿದ್ದಾರೆ.

ABOUT THE AUTHOR

...view details