ಕರ್ನಾಟಕ

karnataka

ETV Bharat / state

ರಾಜ್ಯಪಾಲರಿಗೆ ಕೃಷಿ ಅಧಿಕಾರಿಗಳ ಹೆಸರಿನ ಪತ್ರ ವಿವಾದ.. ರಾಜಭವನಕ್ಕೆ ಭೇಟಿ ನೀಡಿದ ಸಚಿವ ಚಲುರಾಯಸ್ವಾಮಿ ನೇತೃತ್ವದ ಶಾಸಕರ ನಿಯೋಗ - ಈಟಿವಿ ಭಾರತ್​ ಕನ್ನಡ ನ್ಯೂಸ್

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ಶಾಸಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿಯಾಗಿದೆ.

ರಾಜಭವನಕ್ಕೆ ಸಚಿವ ಚಲುವರಾಯಸ್ವಾಮಿ ನೇತೃತ್ವದ ಶಾಸಕರ ನಿಯೋಗ ಭೇಟಿ
ರಾಜಭವನಕ್ಕೆ ಸಚಿವ ಚಲುವರಾಯಸ್ವಾಮಿ ನೇತೃತ್ವದ ಶಾಸಕರ ನಿಯೋಗ ಭೇಟಿ

By

Published : Aug 9, 2023, 4:12 PM IST

Updated : Aug 9, 2023, 4:27 PM IST

ಬೆಂಗಳೂರು :ರಾಜ್ಯಪಾಲರಿಗೆ ಪತ್ರ ಬರೆದಿರುವ ಕೃಷಿ ಅಧಿಕಾರಿಗಳ ವಿಚಾರದಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ ಶಾಸಕರ ನಿಯೋಗ ರಾಜಭವನಕ್ಕೆ ಭೇಟಿ ನೀಡಿತ್ತು. ಪತ್ರ ಸಂಬಂಧ ಕೆಲವೊಂದು ಮಾಹಿತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಚರ್ಚೆ ಮಾಡಿದ್ದು, ಪ್ರಕರಣದ ಹಿಂದೆ ರಾಜಕೀಯ ಕಾರಣ ಇದೆ ಎಂದು ನಿಯೋಗವು ರಾಜ್ಯಪಾಲರ ಗಮನಕ್ಕೆ ತಂದಿದೆ.

ಮಂಡ್ಯ ಜಿಲ್ಲೆಯ ಶಾಸಕರಾದ ಪಿ ಎಂ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿ ಗಣಿಗ, ಕೆ ಎಂ ಉದಯ್ ಗೌಡ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ ಹಾಗೂ ಮಾಜಿ ಶಾಸಕರಾದ ಹೊನ್ನಲಗೆರೆ ಶ್ರೀರಾಮ ಕೃಷ್ಣ, ಕೆ ಬಿ ಚಂದ್ರಶೇಖರ್ ಒಳಗೊಂಡ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದರೂ ಕೆಲವೊಂದು ಸ್ಪಷ್ಟೀಕರಣ ನೀಡಿ ಮಾಹಿತಿ ನೀಡಿದೆ. ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಎನ್ನುವುದನ್ನು ರಾಜ್ಯಪಾಲರಿಗೆ ತಿಳಿಸಿತು.

ಬಹುಶಃ ಅವರು ಮೈತ್ರಿ ಸರ್ಕಾರ ಬರುತ್ತದೆ ಅಂದುಕೊಂಡಿದ್ದರು. ಆದರೇ ಮಂಡ್ಯದಲ್ಲಿ ಕಾಂಗ್ರೆಸ್​ 6 ಸ್ಥಾನ ಗೆದ್ದಿರುವುದಕ್ಕೆ ಸಹಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ನಡುಗಿಸಲಿಕ್ಕೆ ಅವರಿಂದ ಆಗುತ್ತಿಲ್ಲ, ಅದಕ್ಕೆ ಫಾರಿನ್​ಗೆ ಹೋಗಿದ್ದಾರೆ ಅನಿಸುತ್ತಿದೆ. ಪತ್ರ ಬರೆದವನು ಯಾರು? ಮನೆ ಅಡ್ರೆಸ್ ಗೊತ್ತಾಗುತ್ತಿಲ್ಲ. ಪತ್ರದಲ್ಲಿ ಹೆಚ್​ ಡಿ ಕುಮಾರಸ್ವಾಮಿ ನಮ್ಮ ನಾಯಕರು ಅಂತಾ ಉಲ್ಲೇಖಿಸಿದ್ದಾರೆ. ಜನತಾದಳದವರೇ ಇದನ್ನು ಕ್ರಿಯೇಟ್ ಮಾಡಿದ್ದಾರೆ - ಕೃಷಿ ಸಚಿವ ಚಲುವರಾಯಸ್ವಾಮಿ

ಚಲುವರಾಯಸ್ವಾಮಿ ಒಕ್ಕಲಿಗರು ಅದಕ್ಕೆ ಸಹಿಸಲು ಆಗುತ್ತಿಲ್ಲ. ಎರಡು ಬಾರಿ ಸಿಎಂ ಆದವರು ಇಂತಹ ಕೆಳಮಟ್ಟಕ್ಕೆ ಇಳಿಯೋದು ಸಂಸ್ಕಾರ ಅಲ್ಲ. ಅವರ ನಡವಳಿಕೆ ಬದಲಾವಣೆ ಮಾಡಿಕೊಳ್ಳಬೇಕು. ಇದೆಲ್ಲಾ ಜಾಸ್ತಿ ದಿನ ನಡೆಯಲ್ಲ. ಇದನ್ನೇ ಮುಂದುವರೆಸಿದರೆ ನಮ್ಮ ಕೆಲಸ ನಾವು ಮಾಡಬೇಕಾಗುತ್ತದೆ. ಫೇಕ್ ಲೆಟರ್ ಪೂರಕವಾಗಿರೋರು ಯಾರು ಅಂತಾ ಗೊತ್ತಾಗಬೇಕು. ಅದಕ್ಕೆ ಸಿಎಂ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ ಎಂದು ಹೆಚ್ ಡಿಕೆ ವಿರುದ್ಧ ಕೃಷಿ ಸಚಿವರು ವಾಗ್ದಾಳಿ ನಡೆಸಿದರು.

ನಂತರ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ರಾಜ್ಯಪಾಲರಿಗೆ ಅನಾಮಧೇಯ ಪತ್ರ ಹೋಗಿದೆ. ಪತ್ರದಲ್ಲಿ ಯಾವುದೇ ವಿಷಯ ಸ್ಪಷ್ಟತೆಯಿಂದ ಕೂಡಿಲ್ಲ. ಪಕ್ಷದ ಘನತೆ ಗೌರವ ಹಾಳು ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಯಾರು ಇದರ ರೂವಾರಿ, ಆತನ ಹೆಸರು, ಫೋನ್ ನಂಬರ್ ಏನೂ ಬರೆದಿಲ್ಲ. ಪ್ರಕರಣ ತನಿಖೆಯ ಹಂತದಲ್ಲಿದೆ. ರಾಜ್ಯಪಾಲರಲ್ಲಿ ನಿವೇದನೆ ಮಾಡಿಕೊಂಡಿದ್ದೇವೆ. ನಿಮ್ಮ ಸಿಬ್ಬಂದಿ ಪರಿಶೀಲಿಸಿ ಕ್ರಮಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿದ್ದೇವೆ. ಇನ್ಮುಂದೆ ವಿಮರ್ಶೆ ಆಗದೇ ಹೋಗಲ್ಲ. ಇದು ಫೇಕ್ ಲೆಟರ್ ಎಂದು ಗವರ್ನರ್ ಅವರೇ ಹೇಳಿದ್ದಾರೆ. ಪ್ರತಿಯೊಂದನ್ನೂ ಅರ್ಥ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ಭೇಟಿ ಸಫಲ ಆಗಿದೆ ಎಂದರು.

ಇದನ್ನೂ ಓದಿ :ಸಚಿವ ಚೆಲುವರಾಯಸ್ವಾಮಿ ವಿರುದ್ದ ಷಡ್ಯಂತ್ರ ಆರೋಪ: ಪೊರಕೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ

Last Updated : Aug 9, 2023, 4:27 PM IST

ABOUT THE AUTHOR

...view details