ಬೆಂಗಳೂರು:ರಾಗಿಣಿ ಜೊತೆ ಫೋಟೋ ತೆಗೆಸಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು, ಫೋಟೋ ತೆಗೆಸಿಕೊಳ್ಳುವುದು, ಪ್ರಚಾರಕ್ಕೆ ಬರುವುದು ಅವರವರ ಅಭಿಪ್ರಾಯ ಎಂದು ಹೇಳಿದರು.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಪ್ರಕರಣ ಬೆಳಕಿಗೆ ಬರುವುದಕ್ಕೆ ಮುಂಚೆ ಇವರು ಆಪಾದಿತರಾಗಿರಲಿಲ್ಲ. ಈಗಲೂ ನ್ಯಾಯಾಲಯ ತೀರ್ಮಾನ ಮಾಡಬೇಕು. ಆಗ ಫೋಟೋ ತೆಗೆಸಿಕೊಂಡಿದ್ದು ತಪ್ಪು ಅಂತ ನಾನು ಹೇಳುವುದಿಲ್ಲ. ಅಪರಾಧಿಗಳ ಜೊತೆಗೆ ಗುರುತಿಸಿಕೊಳ್ಳುವುದು ತಪ್ಪು. ಅದನ್ನು ಖಂಡಿಸುತ್ತೇನೆ ಎಂದರು.
ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕುತ್ತಿದ್ದೇವೆ ಎಂದ ಸಚಿವರು, ನನಗೆ ಗಾಳಿಯಲ್ಲಿ ಗುಂಡು ಹಾರಿಸುವುದಕ್ಕೆ ಇಷ್ಟವಿಲ್ಲ. ಪ್ರಶಾಂತ್ ಸಂಬರಗಿ, ಇಂದ್ರಜಿತ್ ಲಂಕೇಶ್ ಅವರು ಕೆಲವು ಮಾಹಿತಿ ನೀಡಿದ್ದಾರೆ. ಗೊತ್ತಿರುವವರು ಮಾಹಿತಿ ನೀಡಬಹುದು. ಯಾರೂ ಸಹ ಗಾಳಿಯಲ್ಲಿ ಗುಂಡು ಹಾರಿಸಬಾರದು. ಯಾರು ಯಾರು ಇದ್ದಾರೆ ಎಂದು ಹೇಳಬೇಕು ಎಂದು ಹೇಳಿದ್ರು.