ಕರ್ನಾಟಕ

karnataka

ETV Bharat / state

ಮೂರು-ನಾಲ್ಕು ತಿಂಗಳಲ್ಲಿ ವೈದ್ಯರ ಕೊರತೆ ನೀಗಿಸಲಾಗುವುದು : ಸಚಿವ ಡಾ.ಕೆ‌.ಸುಧಾಕರ್ - Minister Dr K Sudhakar assured to full fill the scarcity of doctors

ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಇರುವುದನ್ನು ಒಪ್ಪುತ್ತೇನೆ. ಅನೇಕ ವರ್ಷಗಳಿಂದ ಈ ಕೊರತೆ ಇದೆ. ಹಿಂದಿನ ಸರ್ಕಾರಗಳು ಇದಕ್ಕೆ ಒತ್ತು ಕೊಡದ ಕಾರಣ ಈ ಕೊರತೆ ಎದುರಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಹೋಗಲು ಹಲವು ವೈದ್ಯರು ಹಿಂಜರಿಯುತ್ತಿದ್ದಾರೆ..

minister-dr-k-sudhakar-assured-to-full-fill-the-scarcity-of-doctors
ಸಚಿವ ಡಾ.ಕೆ‌.ಸುಧಾಕರ್

By

Published : Feb 3, 2021, 9:21 PM IST

ಬೆಂಗಳೂರು :ಮೂರು-ನಾಲ್ಕು ತಿಂಗಳಲ್ಲಿ ವೈದ್ಯರ ಕೊರತೆ ನೀಗಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯ ವೇಳೆ ಸರ್ಕಾರದ ಗಮನ ಸೆಳೆದ ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ, ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಇದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಎದುರಾಗುತ್ತದೆ‌. ಹೀಗಾಗಿ, ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಡಾ.ಕೆ.ಸುಧಾಕರ್, ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಇರುವುದನ್ನು ಒಪ್ಪುತ್ತೇನೆ. ಅನೇಕ ವರ್ಷಗಳಿಂದ ಈ ಕೊರತೆ ಇದೆ. ಹಿಂದಿನ ಸರ್ಕಾರಗಳು ಇದಕ್ಕೆ ಒತ್ತು ಕೊಡದ ಕಾರಣ ಈ ಕೊರತೆ ಎದುರಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಹೋಗಲು ಹಲವು ವೈದ್ಯರು ಹಿಂಜರಿಯುತ್ತಿದ್ದಾರೆ ಎಂದು ತಿಳಿಸಿದರು.

ಓದಿ:ಶಾಲಾ ಶುಲ್ಕ ಸಮಸ್ಯೆ ಪರಿಹಾರಕ್ಕೆ ಸಮಿತಿಗಳ ರಚನೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಇತ್ತೀಚಿನ ದಿನಗಳಲ್ಲಿ ಕ್ರಾಂತಿಕಾರಕ ಬೆಳವಣಿಗೆ ಆಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ 2158 ವೈದ್ಯರ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸಿದ್ದೇವೆ. ಮಾರ್ಚ್ ಅಂತ್ಯದ ವೇಳೆ ಇದನ್ನು ಪೂರ್ಣಗೊಳಿಸುತ್ತೇವೆ.

ಸ್ನಾತಕೋತ್ತರ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ. ಇನ್ನು, ಮೂರು ನಾಲ್ಕು ತಿಂಗಳಲ್ಲಿ ವೈದ್ಯರ ಕೊರತೆ ನೀಗಲಿದೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details