ಕರ್ನಾಟಕ

karnataka

ETV Bharat / state

ಸಿಎಂ ಬಿಎಸ್​ವೈಗೆ ಕೊರೊನಾ ವಾರಿಯರ್ಸ್‌ ಕಾರ್ಡ್ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ತುರ್ತು ಆರೋಗ್ಯ ಸೇವೆ ಯೋಧರ ಒಂದು ಕಾರ್ಯಪಡೆಯನ್ನೇ ರಚಿಸಲಾಗಿದೆ. ಈ ಕಾರ್ಯಪಡೆಯ ಎಲ್ಲರಿಗೂ ಕೊರೊನಾ ವಾರಿಯರ್ ಕಾರ್ಡ್ ಹೆಸರಿನ ಗುರುತಿನ ಚೀಟಿ ನೀಡಲಾಗುತ್ತಿದ್ದು, ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೂ ಗುರುತಿನ ಚೀಟಿ ನೀಡಲಾಯಿತು.

By

Published : Mar 27, 2020, 7:56 PM IST

ಸಚಿವ ಡಾ.ಸುಧಾಕರ್
ಸಚಿವ ಡಾ.ಸುಧಾಕರ್

ಬೆಂಗಳೂರು: ಕೊರೊನಾ ವಿರುದ್ಧ ಹೋರಾಟ ನಡೆಸುವವರಿಗೆ ನೀಡಲಾಗುವ ಕೊರೊನಾ ವಾರಿಯರ್ಸ್‌ ಕಾರ್ಡ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ನೀಡಲಾಗಿದೆ.

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ತುರ್ತು ಆರೋಗ್ಯ ಸೇವೆ ಯೋಧರ ಒಂದು ಕಾರ್ಯಪಡೆಯನ್ನೇ ರಚಿಸಲಾಗಿದೆ. ಈ ಕಾರ್ಯಪಡೆಯ ಎಲ್ಲರಿಗೂ ಕೊರೊನಾ ವಾರಿಯರ್ ಕಾರ್ಡ್ ಹೆಸರಿನ ಗುರುತಿನ ಚೀಟಿ ನೀಡಲಾಗುತ್ತಿದ್ದು, ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರಿಗೂ ನೀಡಲಾಯಿತು.

ಕೊರೊನಾ ವಾರಿಯರ್ಸ್‌ ಕಾರ್ಡ್ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್

ಕೋವಿಡ್-19 ನಿಯಂತ್ರಣದ ಜವಾಬ್ದಾರಿ ನಿರ್ವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೊರೊನಾ ವಾರಿಯರ್ಸ್‌ ಕಾರ್ಡ್ ಅನ್ನು ಸಿಎಂ ಬಿಎಸ್​ವೈಗೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿಗಳಾದ‌ ಡಾ. ಅಶ್ವತ್ಥ್​​ ನಾರಾಯಣ್, ಲಕ್ಷ್ಮಣ್ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ABOUT THE AUTHOR

...view details